ಬ್ರೇಕಿಂಗ್ ನ್ಯೂಸ್
22-07-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಮಂಜುನಾಥ ಸ್ವಾಮಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆ ಹಿಂದೂ ಪರ ನೀತಿ
“ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ. ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ ಎಂದರು
ಯಾರನ್ನೂ ರಕ್ಷಿಸುವ ಅವಮಾನಿಸುವ ಪ್ರಶ್ನೆ ಇಲ್ಲ:
ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು. 40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ” ಎಂದು ತಿಳಿಸಿದರು.
Senior Congress leader and former MP D.K. Suresh has stated that the Dharmasthala temple is not the private property of any one family, but a sacred place that belongs to all devotees. He emphasized that if Lord Manjunatha is disrespected, it is an insult to all devotees.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm