ಬ್ರೇಕಿಂಗ್ ನ್ಯೂಸ್
23-07-25 08:03 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.
ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯ ಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪುಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ SOP ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನ 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಕೆಲವು ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಕೆಂಪುಕಲ್ಲು ಗಣಿಗಾರಿಕೆಗೆ ಕೆಲವು ನಿರ್ಬಂಧಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗ್ರಾಹಕರಿಗೆ ದೊರೆಯುವಂತಾಗಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
In a significant move to streamline red stone quarrying operations in Dakshina Kannada district, a key meeting was held at Vidhana Soudha today under the leadership of District In-charge Minister Dinesh Gundu Rao and Speaker U.T. Khader with senior officials of the Department of Mines and Geology.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am