ಬ್ರೇಕಿಂಗ್ ನ್ಯೂಸ್
24-07-25 07:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23 : ಕೆ-ರೈಡ್ ವಿಶೇಷ ಉಪ ಆಯುಕ್ತ, ಐಎಎಸ್ ಅಧಿಕಾರಿ ವಾಸಂತಿ ಅಮರ್ ಮನೆಯಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು ₹9.02 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿ ಬಿಚ್ಚಿ ಬಿದ್ದಿದ್ದಾರೆ.
ವಾಸಂತಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 8 ಅಧಿಕಾರಿಗಳ ಮನೆಗಳಲ್ಲಿ ಬುಧವಾರ ಶೋಧ ನಡೆಸಿ, ಒಟ್ಟು ₹37.41 ಕೋಟಿಯಷ್ಟು ಮೌಲ್ಯದ ಸಂಪತ್ತನ್ನು ಪತ್ತೆ ಮಾಡಲಾಗಿದೆ. ಎಂಟೂ ಅಧಿಕಾರಿಗಳ ಪೈಕಿ ವಾಸಂತಿ ಅವರು ಹೊಂದಿರುವ ಆಸ್ತಿಯ ಮೌಲ್ಯವೇ ಅತಿಹೆಚ್ಚು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ನಗರದ ಆರ್.ಟಿ.ನಗರದಲ್ಲಿ ವಾಸಂತಿ ವಾಸವಿರುವ ಮನೆ, ರಾಜ್ಯದ ವಿವಿಧೆಡೆ ಆಕೆಯ ಆಪ್ತರ ಮನೆಗಳು ಸೇರಿ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ. ವಾಸಂತಿ ಹೆಸರಿನಲ್ಲಿ ₹7.40 ಕೋಟಿ ಮೌಲ್ಯದ 4 ಮನೆಗಳು, ಮೂರು ನಿವೇಶನಗಳು ಮತ್ತು 3 ಎಕರೆ ಕೃಷಿ ಭೂಮಿ ಹೊಂದಿರುವುದು ಪತ್ತೆಯಾಗಿದೆ.
ವಾಸಂತಿ ಮತ್ತು ಆಕೆಯ ಕುಟುಂಬದವರ ಹೆಸರಿನಲ್ಲಿ ಮೂರು ಕಾರುಗಳಿದ್ದು, ಅವುಗಳ ಈಗಿನ ಮೌಲ್ಯ ₹90 ಲಕ್ಷ. ಜತೆಗೆ ಮನೆಯಲ್ಲಿ ಒಟ್ಟು ₹12 ಲಕ್ಷ ಮೌಲ್ಯದ ಚಿನ್ನಾಭರಣಗಳು ಸಿಕ್ಕಿವೆ.
ಬೆಂಗಳೂರು ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿ ಆಗಿದ್ದಾಗ ಸರ್ಕಾರಿ ಜಮೀನೊಂದನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದಲ್ಲಿ ವಾಸಂತಿ ವಿರುದ್ಧ ಕಂದಾಯ ಇಲಾಖೆ ನೀಡಿದ್ದ ದೂರನ್ನು ಆಧರಿಸಿ, ಜುಲೈ 16ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶೇಕು ಚೌವ್ಹಾಣ್ ಮನೆ ಮೇಲೆ ದಾಳಿ ;
ಕೊಪ್ಪಳ ಜಿಲ್ಲೆಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕರಾದ ಶೇಕು ಚೌವ್ಹಾಣ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅಧಿಕಾರಿಗಳು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಹಚ್ಚಿದ್ದು, ಅಧಿಕಾರಿಗಳನ್ನು ಬೆಚ್ಚಿಬೀಳುವಂತೆ ಮಾಡಿದೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಸುನೀಲ್ ಮೇಗಳಮನಿ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ 54 ಲಕ್ಷ ರೂ. ನಗದು, ಬ್ಯಾಂಕ್ ಖಾತೆಗಳಲ್ಲಿ 26 ಲಕ್ಷ ರೂ. ಬ್ಯಾಲೆನ್ಸ್, 750 ಗ್ರಾಂ ಬಂಗಾರ, 4 ಕೆ.ಜಿ ಬೆಳ್ಳಿ, 13 ಸೈಟ್, 7 ಎಕರೆ ಜಮೀನು ಹಾಗೂ ಕೊಪ್ಪಳ ಮತ್ತು ಹುಬ್ಬಳ್ಳಿಯಲ್ಲಿರುವ ಮನೆಗಳ ದಾಖಲೆಗಳು ಸಿಕ್ಕಿವೆ.
ಇದು ಅಷ್ಟೇ ಅಲ್ಲದೆ, ದಾಳಿಯಲ್ಲಿ ಚೌವ್ಹಾಣ್ ಅವರ ಹೆಸರಿನಲ್ಲಿ ನೊಂದಾಯಿತ ಕಾರು, ಬೈಕ್ ಸೇರಿ ಒಟ್ಟು ₹2.38 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಎಲ್ಲವೂ ಕಾನೂನುಬಾಹಿರವಾಗಿ ಗಳಿಸಲಾಗಿದೆ ಎಂಬ ಶಂಕೆಯ ಮೇಲೆ ತನಿಖೆ ಮುಂದುವರೆಯುತ್ತಿದೆ.
ಈ ದಾಳಿ ರಾಜ್ಯದ ಬೃಹತ್ ಮಟ್ಟದ ಭ್ರಷ್ಟಾಚಾರದ ಮತ್ತೊಂದು ಉದಾಹರಣೆ ಎಂಬಂತೆ ಹೊರಹೊಮ್ಮಿದ್ದು, ಶೇಖು ಚೌವ್ಹಾಣ್ ವಿರುದ್ಧ ಮುಂದಿನ ದಿನಗಳಲ್ಲಿ ಕ್ರಿಮಿನಲ್ ಪ್ರಕರಣದ ದಾಖಲಾತಿ ಸಾಧ್ಯತೆ ಇದೆ.
In a major crackdown on corruption, the Karnataka Lokayukta conducted raids across multiple locations on Wednesday, targeting eight government officials from various departments. The most significant revelation came from the residence of IAS officer Vasanthi Amar, where unaccounted assets worth ₹9.02 crore were uncovered.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm