ಬ್ರೇಕಿಂಗ್ ನ್ಯೂಸ್
25-07-25 12:25 pm HK News Desk ಕರ್ನಾಟಕ
ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am