ಬ್ರೇಕಿಂಗ್ ನ್ಯೂಸ್
25-07-25 12:25 pm HK News Desk ಕರ್ನಾಟಕ
ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am