ಬ್ರೇಕಿಂಗ್ ನ್ಯೂಸ್
25-07-25 01:22 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 25: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ. ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ.
ಶಮಂತ್ ಪಿಕಪ್ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು. ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು.
ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರತ್ನಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heart-wrenching tragedy near Kolamage village in Kalasa Taluk, Chikkamagaluru district, a 23-year-old youth died after the pickup jeep he was driving lost control and plunged into the Bhadra River. In a devastating turn of events, the victim's grief-stricken mother later ended her life by jumping into a nearby lake.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am