ಬ್ರೇಕಿಂಗ್ ನ್ಯೂಸ್
25-07-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ತನಿಖೆಗೆ ರಚಿಸಿರುವ ಎಸ್ಐಟಿ ತಂಡದಿಂದ ಐಪಿಎಸ್ ಅಧಿಕಾರಿ, ಬೆಂಗಳೂರು ಸಿಎಆರ್ ಡಿಸಿಪಿ ಡಾ.ಎಸ್.ಕೆ.ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದು ಈ ಬಗ್ಗೆ ತಂಡದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.
ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಗೆ ಪತ್ರ ಬರೆದಿದ್ದು, ''ವೈಯಕ್ತಿಕ ಕಾರಣಕ್ಕೆ ವಿಶೇಷ ತನಿಖಾ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದೇನೆ. ಆದ್ದರಿಂದ ನನ್ನನ್ನು ತಂಡದಿಂದ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ತನಿಖೆಯ ರೂಪುರೇಷೆಗಳ ಕುರಿತು ಸಿಐಡಿ ಕಚೇರಿಯಲ್ಲಿ ನಡೆದ ಎಸ್ಐಟಿ ಸಭೆಗೂ ಸೌಮ್ಯಲತಾ ಗೈರಾಗಿದ್ದರು. ಮನವಿಯನ್ನು ಪುರಸ್ಕರಿಸಿರುವ ಪ್ರಣವ್ ಮೊಹಾಂತಿ, ಎಸ್ಐಟಿ ತಂಡದಿಂದ ಸೌಮ್ಯಲತಾ ಅವರ ಹೆಸರನ್ನು ಕೈಬಿಡುವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಗೊತ್ತಾಗಿದೆ.
ಎಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ರಚಿಸಲಾಗಿರುವ ನಾಲ್ವರು ಸದಸ್ಯರ ಎಸ್ಐಟಿಗೆ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್, ಡಿಸಿಪಿ ಸೌಮ್ಯಲತಾ, ಎಎನ್ಎಫ್ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನಿಯೋಜಿಸಲಾಗಿತ್ತು. ಈ ತಂಡದಿಂದ ಸೌಮ್ಯಲತಾ ಹಿಂದೆ ಸರಿದಿರುವುದರಿಂದ ಬೇರೊಬ್ಬ ಮಹಿಳಾ ಐಪಿಎಸ್ ಅಧಿಕಾರಿ ನಿಯೋಜನೆಗೆ ಸರಕಾರ ಚಿಂತನೆ ನಡೆಸಿದೆ.
ಅಧಿಕೃತವಾಗಿ ಮಾಹಿತಿ ತಿಳಿಸಿಲ್ಲ
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, 'ಎಸ್ ಐಟಿ ಮುಖ್ಯಸ್ಥರಾಗಲಿ ಅಥವಾ ಅಧಿಕಾರಿ ಸೌಮ್ಯಲತಾ ಅವರಾಗಲೀ ಅಧಿಕೃತವಾಗಿ ನನಗೆ ಮಾಹಿತಿ ತಿಳಿಸಿಲ್ಲ. ಆದರೆ ಅನಧಿಕೃತವಾಗಿ ಸೌಮ್ಯಲತಾ ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣಕ್ಕೆ ಎಸ್ ಐಟಿಯಿಂದ ಹೊರಗುಳಿಯುವ ಬಗ್ಗೆ ಅವರು ಮಾಹಿತಿ ಕೊಟ್ಟಿದ್ದಾರೆ. ಅವರನ್ನು ಬದಲಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಮತ್ತೊಬ್ಬ ಪೊಲೀಸ್ ಅಧಿಕಾರಿಯೂ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ನಾಲ್ಕು ಐಪಿಎಸ್ ಅಧಿಕಾರಿಗಳು ಹಾಗೂ 20 ಜನ ಪೊಲೀಸ್ ಸಿಬ್ಬಂದಿಯನ್ನು ಎಸ್ಐಟಿಗೆ ನಿಯೋಜಿಸಿ ಡಿಜಿಪಿ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದರು. 20 ಸಿಬ್ಬಂದಿಯ ಪೈಕಿ ಒಬ್ಬ ಪೊಲೀಸ್ ಅಧಿಕಾರಿ ಧರ್ಮಸ್ಥಳ ಕ್ಷೇತ್ರದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದೆ ಎಂಬ ಕಾರಣ ನೀಡಿ ತನಿಖಾ ತಂಡದಿಂದ ಕೈಬಿಡುವಂತೆ ಕೋರಿದ್ದಾರೆ. ಈ ಅಧಿಕಾರಿ ಸಹ ಎಸ್ಐಟಿ ಸಭೆಯಲ್ಲಿ ಭಾಗಿಯಾಗಿಲ್ಲ ಎಂದು ಗೊತ್ತಾಗಿದೆ. ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಯಿಂದ ದೂರ ಸರಿದ ಅಧಿಕಾರಿಗಳ ಬಗ್ಗೆ ಸರಕಾರಕ್ಕೆ ಮಾಹಿತಿ ನೀಡಿ ಹೊಸಬರ ನೇಮಕಕ್ಕೆ ಮನವಿ ಮಾಡುವ ಸಾಧ್ಯತೆಯಿದೆ.
In a notable development, IPS officer Dr. S.K. Soumya Latha, currently serving as DCP of Bengaluru CAR, has opted to withdraw from the Special Investigation Team (SIT) probing the Dharmasthala human remains case, citing personal reasons. She formally communicated her decision to SIT Chief ADGP Pronab Mohanty through an official letter.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm