ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm