ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm