ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm