ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm