ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.
ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm