ಬ್ರೇಕಿಂಗ್ ನ್ಯೂಸ್
30-07-25 10:33 am HK News Desk ಕರ್ನಾಟಕ
ಶಿವಮೊಗ್ಗ, ಜುಲೈ 30 : ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ತಾಲೂಕಿನ ಗಾಜನೂರು ಡ್ಯಾಂ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident early Wednesday morning around 3:00 AM, a private Durgaamba bus collided with a stationary lorry near Gajanur Dam in shivamogga, resulting in the death of two passengers and serious injuries to at least 15 others.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm