ಬ್ರೇಕಿಂಗ್ ನ್ಯೂಸ್
30-07-25 10:33 am HK News Desk ಕರ್ನಾಟಕ
ಶಿವಮೊಗ್ಗ, ಜುಲೈ 30 : ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ತಾಲೂಕಿನ ಗಾಜನೂರು ಡ್ಯಾಂ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident early Wednesday morning around 3:00 AM, a private Durgaamba bus collided with a stationary lorry near Gajanur Dam in shivamogga, resulting in the death of two passengers and serious injuries to at least 15 others.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm