ಬ್ರೇಕಿಂಗ್ ನ್ಯೂಸ್
30-07-25 10:33 am HK News Desk ಕರ್ನಾಟಕ
ಶಿವಮೊಗ್ಗ, ಜುಲೈ 30 : ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ತಾಲೂಕಿನ ಗಾಜನೂರು ಡ್ಯಾಂ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದ ಶಿವಮೊಗ್ಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತುಂಗಾ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಹಾಗೂ ತಂಡ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಲಾರಿ ಕತ್ತಲಲ್ಲಿ ನಿಂತಿರುವುದು ಹಾಗೂ ಬಸ್ ವೇಗವಾಗಿ ಚಲಿಸುತ್ತಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic road accident early Wednesday morning around 3:00 AM, a private Durgaamba bus collided with a stationary lorry near Gajanur Dam in shivamogga, resulting in the death of two passengers and serious injuries to at least 15 others.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am