ಬ್ರೇಕಿಂಗ್ ನ್ಯೂಸ್
30-07-25 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ವಿಶೇಷ ತನಿಖಾ ತಂಡ(ಎಸ್ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ನಿನ್ನೆ ಮಂಗಳವಾರದ ಕಾರ್ಯಾಚರಣೆ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ದೃಢಪಡಿಸಿವೆ. ಈ ಬೆಳವಣಿಗೆ ತನಿಖೆಗೆ ಹೊಸ ಆಯಾಮ ನೀಡಿದೆ ಎಂದವರು ಹೇಳಿದ್ದಾರೆ.


ಎಸ್ಐಟಿಯು ಈ ಬೆಳವಣಿಗೆ ನಂತರ ತಕ್ಷಣ ಸ್ಥಳದ 10 ಅಡಿ ಆಳದ ವರೆಗೆ ಅಗೆಯುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ.
ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ 'ಲಕ್ಷ್ಮಿ' ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ಐಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ಇದುವರೆಗೆ ಎಸ್ಐಟಿ ಪ್ರದರ್ಶಿಸಿರುವ ಗಂಭೀರತೆ, ಶಿಸ್ತು ಮತ್ತು ಕಾರ್ಯದಕ್ಷತೆ ನಮಗೆ ಭರವಸೆಯನ್ನು ಹುಟ್ಟುಹಾಕಿದೆ. ಮುಂದಿನ ಸ್ಥಳಗಳ ಪರಿಶೀಲನೆಯ ವೇಳೆ ನಾವು ಅವರ ಕೆಲಸಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಇಡುತ್ತೇವೆ ಎಂದು ವಕೀಲ ಮಂಜುನಾಥ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
In a major development in the Dharmasthala case, significant evidence has reportedly been recovered from the first marked site identified by the complainant. The Special Investigation Team (SIT) unearthed an ATM card, a PAN card, and a piece of red cloth while digging at a depth of approximately 2.5 feet, according to a statement released by advocate Manjunath N., representing Sujata Bhatt, the mother of Ananya Bhatt, a medical student who was allegedly missing from Dharmasthala.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm