ಬ್ರೇಕಿಂಗ್ ನ್ಯೂಸ್
30-07-25 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚಿಸಲಾಗಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತಾಗಿ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಕೇಂದ್ರ ಸೇವೆಗೆ ಹೋದಲ್ಲಿ ಬೇರೊಬ್ಬರನ್ನು ಆ ಹುದ್ದೆಗೆ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾನೂನು ಪ್ರಕಾರ, ಏನು ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಾಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೆ ನಮ್ಮಲ್ಲಿ ಹಲವರು ಹಿರಿಯ ಅಧಿಕಾರಿಗಳಿದ್ದಾರೆ. ಎಸ್ಐಟಿ ತನಿಖೆಗೆ ಬೇರೊಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದರು.

'ಕೇಂದ್ರದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಮುಂದುವರಿಯಬಹುದೇ ಅಥವಾ ಬದಲಿಸಬೇಕೇ ಎಂಬ ಬಗ್ಗೆ ನಾವು ಚರ್ಚಿಸುತ್ತೇವೆ. ಕಾನೂನು ಅನುಮತಿಸಿದರೆ ಎಸ್ಐಟಿ ಮುಖ್ಯಸ್ಥರಾಗಿ ಮುಂದುವರಿಯಬಹುದು. ಒಂದು ವೇಳೆ ಅವರನ್ನು ಬದಲಿಸಬೇಕಾಗಿ ಬಂದರೆ, ಸರ್ಕಾರ ಅದೇ ಶ್ರೇಣಿಯ ಅಧಿಕಾರಿಯನ್ನು ನೇಮಿಸುತ್ತದೆ ಎಂದು ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್ಐಟಿ ತನಿಖೆ ಕುರಿತು ಕೇಳಿದಾಗ, ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆ ಮುಗಿದು ವರದಿ ಬಂದ ನಂತರ ಮಾತನಾಡಬಹುದು. ಅಲ್ಲಿಯವರೆಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
The Karnataka government will decide whether to replace ADGP Pranab Mohanty as the head of the Special Investigation Team (SIT) probing the alleged mass grave case in Dharmasthala, depending on his central service appointment, said Home Minister Dr. G. Parameshwara on Tuesday.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm