ಬ್ರೇಕಿಂಗ್ ನ್ಯೂಸ್
30-07-25 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚಿಸಲಾಗಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತಾಗಿ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಕೇಂದ್ರ ಸೇವೆಗೆ ಹೋದಲ್ಲಿ ಬೇರೊಬ್ಬರನ್ನು ಆ ಹುದ್ದೆಗೆ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾನೂನು ಪ್ರಕಾರ, ಏನು ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಾಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೆ ನಮ್ಮಲ್ಲಿ ಹಲವರು ಹಿರಿಯ ಅಧಿಕಾರಿಗಳಿದ್ದಾರೆ. ಎಸ್ಐಟಿ ತನಿಖೆಗೆ ಬೇರೊಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದರು.

'ಕೇಂದ್ರದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಮುಂದುವರಿಯಬಹುದೇ ಅಥವಾ ಬದಲಿಸಬೇಕೇ ಎಂಬ ಬಗ್ಗೆ ನಾವು ಚರ್ಚಿಸುತ್ತೇವೆ. ಕಾನೂನು ಅನುಮತಿಸಿದರೆ ಎಸ್ಐಟಿ ಮುಖ್ಯಸ್ಥರಾಗಿ ಮುಂದುವರಿಯಬಹುದು. ಒಂದು ವೇಳೆ ಅವರನ್ನು ಬದಲಿಸಬೇಕಾಗಿ ಬಂದರೆ, ಸರ್ಕಾರ ಅದೇ ಶ್ರೇಣಿಯ ಅಧಿಕಾರಿಯನ್ನು ನೇಮಿಸುತ್ತದೆ ಎಂದು ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್ಐಟಿ ತನಿಖೆ ಕುರಿತು ಕೇಳಿದಾಗ, ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆ ಮುಗಿದು ವರದಿ ಬಂದ ನಂತರ ಮಾತನಾಡಬಹುದು. ಅಲ್ಲಿಯವರೆಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
The Karnataka government will decide whether to replace ADGP Pranab Mohanty as the head of the Special Investigation Team (SIT) probing the alleged mass grave case in Dharmasthala, depending on his central service appointment, said Home Minister Dr. G. Parameshwara on Tuesday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am