ಬ್ರೇಕಿಂಗ್ ನ್ಯೂಸ್
01-08-25 11:47 am Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಹೆಸರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ ಐಡಿಎಲ್) ಡಿ ದರ್ಜೆಯ ನೌಕರ, ಅರ್ಥಾತ್ ಕಚೇರಿಯಲ್ಲಿ ಕೆಳ ಹಂತದ ಗುಮಾಸ್ತ ಹುದ್ದೆಯಲ್ಲಿದ್ದವ. 15 ಸಾವಿರ ವೇತನಕ್ಕೆ ಹೊರುಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾತ. ಆದರೆ ಲೋಕಾಯುಕ್ತ ದಾಳಿ ನಡೆಸಿದಾಗ, ಈ ವ್ಯಕ್ತಿಯ ಆಸ್ತಿ ಕಂಡು ಬೆಚ್ಚಿ ಬಿದ್ದಿದ್ದಾರೆ. ಕಳಕಪ್ಪ ನಿಡಗುಂದಿ ಎಂಬ ಈ ವ್ಯಕ್ತಿಯಲ್ಲಿ 100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕೆಆರ್ ಐಡಿಎಲ್ ಗೆ ಸೇರಿದ ಆರಂಭದಲ್ಲಿ ಕಳಕಪ್ಪ ನಿಡಗುಂದಿ 200 ರೂ. ಪಡೆಯುತ್ತಿದ್ದ ಹೊರ ಗುತ್ತಿಗೆ ನೌಕರ. ಅದರಂತೆ, 17 ವರ್ಷಗಳಲ್ಲಿ ಕೊನೆಯ ಬಾರಿಗೆ ಇವನ ಖಾತೆಗೆ ಜಮೆಯಾಗಿದ್ದು ತಿಂಗಳಿಗೆ 15 ಸಾವಿರ ಕೂಲಿ! ಆದರೆ, ದಾಳಿ ವೇಳೆ ಭಾರೀ ಪ್ರಮಾಣದ ಆಸ್ತಿ ಪತ್ತೆಯಾಗಿದ್ದು ಲೋಕಾಯುಕ್ತ ಅಧಿಕಾರಿಗಳನ್ನೇ ದಂಗುಬಡಿಸಿದೆ.

ಕಳಕಪ್ಪ ಮನೆಯಲ್ಲಿದ್ದ ಆಸ್ತಿ ದಾಖಲೆಗಳ ಪರಿಶೀಲನೆ ನಂತರ ಕೆಆರ್ ಐಡಿಎಲ್ ನಿಗಮದ ಎಡಬ್ಲ್ಯೂಇ ಮತ್ತು ಡಬ್ಲ್ಯೂಇ ಕಚೇರಿಗಳಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್, ಇನ್ಸ್ಪೆಕ್ಟರ್ ಗಳಾದ ಸುನೀಲ್, ಚಂದ್ರಪ್ಪ, ವಿಜಯಕುಮಾರ್, ನಾಗರತ್ನ, ಶೈಲಜಾ ಹಾಗೂ ಸಿಬ್ಬಂದಿ ಇದ್ದರು.
ಕೆಆರ್ ಐಡಿಎಲ್ ನಲ್ಲಿ 2022ರಿಂದ 2024 ರ ನಡುವೆ ಕೈಗೆತ್ತಿಕೊಂಡ ವಿವಿಧ ಕಾಮಗಾರಿಗಳಲ್ಲಿ 72 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಅಕ್ರಮ ಕುರಿತಾಗಿ ಕೆಆರ್ ಐಡಿಎಲ್ ಅಧಿಕಾರಿಗಳು, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಕೆಆರ್ ಐಡಿಎಲ್ ಕಚೇರಿಯಲ್ಲಿದ್ದ ಹಿಂದಿನ ಇಇ ಜೆಡ್.ಎಂ. ಚಿಂಚೋಳಿಕರ್ ಹಾಗೂ ಹೊರಗುತ್ತಿಗೆ ನೌಕರ ಕಳಕಪ್ಪ ನಿಡಗುಂದಿ ಅವರಿಬ್ಬರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಹೆಸರಿಸಲಾಗಿತ್ತು. ದೂರು ಕೇಳಿಬಂದ ಬೆನ್ನಲ್ಲೇ ಇಬ್ಬರನ್ನೂ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಆದರೆ ಜೆಡ್.ಎಂ.ಚಿಂಚೋಳಿಕರ್ ತನ್ನ ಮೇಲಿನ ಅಮಾನತು ಆದೇಶಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಲ್ಲದೆ, ಮಾತೃ ಇಲಾಖೆಯ ಸೇವೆಗೆ ಮರಳಿ, ದಾವಣಗೆರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ವಿಚಾರ ತೀವ್ರ ಆಕ್ಷೇಪಕ್ಕೆ ಗುರಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಆದೇಶ ಮಾಡಿತ್ತು. ದೂರಿನಂತೆ ಕೊಪ್ಪಳ ಜಿಲ್ಲಾ ಲೋಕಾಯುಕ್ತ ವಿಭಾಗದಿಂದ ಈಗ ಕಳಕಪ್ಪ ನಿಡಗುಂದಿ ಮನೆ, ಇನ್ನಿತರ ಆಸ್ತಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
24 ಮನೆಗಳ ಮಾಲೀಕ ಈ ಗುಮಾಸ್ತ !
ಕೊಪ್ಪಳ ಹಾಗೂ ಭಾಗ್ಯನಗರ ಪ್ರದೇಶದಲ್ಲಿ ಕಳಕಪ್ಪ ನಿಡಗುಂದಿಗೆ ಸೇರಿದ 24 ಮನೆಗಳಿರುವುದನ್ನು ಲೋಕಾಯುಕ್ತ ಪತ್ತೆ ಮಾಡಿದೆ. ಬಂಡಿ, ಹಿಟ್ನಾಳ್, ಹುಲಿಗಿ, ಯಲಬುರ್ಗಾದಲ್ಲಿ ಪತ್ನಿ, ತಮ್ಮ ಹಾಗೂ ಬಾಮೈದನ ಹೆಸರಿನಲ್ಲಿ 40 ಎಕರೆ ಜಮೀನಿದೆ. ಇದಲ್ಲದೆ 5 ಕಡೆ ನಿವೇಶನ, ಎರಡು ಕಾರು, ಎರಡು ಬೈಕ್, 350 ಗ್ರಾಂ ಬಂಗಾರ, ಒಂದೂವರೆ ಕೆ.ಜಿ ಬೆಳ್ಳಿ ಪತ್ತೆಯಾಗಿದೆ. ಆಸ್ತಿ ಮಾಡಿರುವುದಕ್ಕೆ ಸಂಬಂಧಿಸಿ ಹತ್ತಾರು ಬೇನಾಮಿ ದಾಖಲೆಗಳು ಲಭ್ಯವಾಗಿವೆ. ಕೊಪ್ಪಳ ಹಾಗೂ ಭಾಗ್ಯನಗರದಲ್ಲಿ ಮೂರು ಮಹಡಿಗಳ ಮನೆಗಳಿದ್ದು ಐಷಾರಾಮಿ ಬಂಗಲೆಯಂತಿವೆ.
ಕಳಕಪ್ಪ ನಿಡಗುಂದಿ ಮೂಲತಃ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ನಿವಾಸಿ. ಕಡು ಬಡತನದಲ್ಲಿದ್ದ ನಿಡಗುಂದಿ ಈಗ ಕೋಟ್ಯಧಿಪತಿ. ಕೆಆರ್ ಐಡಿಎಲ್ ನಿಗಮದ ಕಚೇರಿಗೆ ಬರುತ್ತಿದ್ದ ಎಲ್ಲ ಅಧಿಕಾರಿಗಳು ಈ ವ್ಯಕ್ತಿ ಹೇಳಿದ ಕೆಲಸಗಳನ್ನು ಮಾತ್ರ ಮಾಡುತ್ತಿದ್ದರು. ಹಿಂದೆ ಇಲ್ಲಿ ಅಧಿಕಾರಿಗಳಾಗಿದ್ದ ಜಿ.ಎಂ.ಕೊರಬು ಹಾಗೂ ಕೊಪ್ಪಳದ ಚಿಂಚೋಳಿಕರ್ ಅವರು ಕಳಕಪ್ಪ ಹೇಳಿದಂತೆ ನಡೆದುಕೊಳ್ಳುತ್ತಿದ್ದರು. ಈತನ ಭ್ರಷ್ಟ ಆಸ್ತಿಗೆ ಇವರೇ ಬೆನ್ನೆಲುಬಾಗಿದ್ದರು ಎಂಬ ಆರೋಪ ಬಲವಾಗಿದೆ.
In a startling revelation, a low-level contract employee at the Karnataka Rural Infrastructure Development Limited (KRIDL) has been found to own assets worth over ₹100 crore. The Lokayukta officials, who conducted the raid, were left shocked at the scale of unaccounted wealth amassed by the individual.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm