ಬ್ರೇಕಿಂಗ್ ನ್ಯೂಸ್
01-08-25 09:09 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಕಾಶ್ಮೀರಿ ಫೈಲ್ಸ್, ಕೇರಳ ಫೈಲ್ಸ್ ರೀತಿಯಲ್ಲೇ ಧರ್ಮಸ್ಥಳ ಫೈಲ್ಸ್ ಹೆಸರಿನಲ್ಲಿ ಚಲನಚಿತ್ರ ಮಾಡಲು ರೆಡಿ ಮಾಡಿಕೊಳ್ಳಲಾಗಿದೆ. ಸುದ್ದಿ ವಾಹಿನಿ ಜೊತೆಗೆ ನಿರ್ಮಾಪಕ ಎ.ಗಣೇಶ್, ಧರ್ಮಸ್ಥಳ ಫೈಲ್ಸ್ ಸಿನಿಮಾ ತೆಗೆಯುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಮಾಡಲು ಫಿಲಂ ಚೇಂಬರ್ ನಿಂದ ಅನುಮತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ.
'ಧರ್ಮಸ್ಥಳ ಫೈಲ್ಸ್' ಹೆಸರಿನಲ್ಲಿ 20 ದಿನಗಳ ಹಿಂದೆಯೇ ಟೈಟಲ್ ಬುಕ್ ಮಾಡಿದ್ದೆವು. ಧರ್ಮಸ್ಥಳ ಫೈಲ್ಸ್ ಸಿನಿಮಾ ಮತ್ತು ವೆಬ್ ಸಿರೀಸ್ ಮಾಡೋಕೆ ಪ್ಲಾನ್ ಇದೆ. ಫಿಲಂ ಚೇಂಬರ್ ನಲ್ಲಿ ಈಗಾಗಲೇ ಟೈಟಲ್ ರಿಜಿಸ್ಟರ್ ಮಾಡಿಸಿದ್ದೇವೆ. ಚಿತ್ರದ ಕತೆ ಏನೆಂದು ಇನ್ನಷ್ಟೇ ಆಗಬೇಕಿದೆ. ಧರ್ಮಸ್ಥಳದಲ್ಲಿ ಆಗ್ತಿರೋ ಬೆಳವಣಿಗೆ ಆಧರಿಸಿ ಚಿತ್ರ ಮಾಡಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಬಳಿ ಪರ್ಮಿಶನ್ ಪಡೆದೇ ಚಿತ್ರ ಮಾಡುತ್ತೇವೆ. ವಾಸ್ತವ ವಿಚಾರ, ನೈಜತೆಯನ್ನು ಒಳಗೊಂಡು ಚಿತ್ರ ಕತೆ ಮಾಡುತ್ತೇವೆ ಎಂದು ಗಣೇಶ್ ಹೇಳಿದ್ದಾರೆ.
ಕಾನೂನು ತೊಡಕು ಉಂಟಾದ್ರೆ ಅದರ ಪ್ರಕ್ರಿಯೆ ಪಾಲಿಸಿಕೊಂಡು ಸಿನಿಮಾ ಮಾಡಲಾಗುವುದು. ವಿಕೆ ಪ್ರಕಾಶ್ ಎನ್ನುವ ಮಲಯಾಳಿ ನಿರ್ದೇಶಕರಿಂದ ಸಿನಿಮಾ ಮಾಡ್ಸೋ ಪ್ಲಾನ್ ಇದೆ. ಎಂ.ಎಸ್ ರಮೇಶ್ ಅವರಿಂದ ಚಿತ್ರದ ಕರೆ ತಯಾರು ಮಾಡ್ತಿದೇವೆ. ಶ್ರೀರಾಮ್ ಸೇರಿದಂತೆ ಹಲವು ಸಿನಿಮಾ ಮಾಡಿರೋ ನಿರ್ದೇಶಕರಿಂದ ಕಥೆ ತಯಾರಾಗ್ತಿದೆ. ಓಂ ಶ್ರೀ ಚಾಮುಂಡೇಶ್ವೇರಿ ಪ್ರೋಡಕ್ಷನ್ ಬ್ಯಾನರಿನಡಿ ಚಿತ್ರ ತಯಾರಾಗ್ತಿದೆ ಎಂದು ಹೇಳಲಾಗುತ್ತಿದೆ.
ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿರುವುದು ದೇಶಾದ್ಯಂತ ಸಂಚಲನ ಎಬ್ಬಿಸಿದ್ದು ಧರ್ಮಸ್ಥಳ ಫೈಲ್ಸ್ ಎನ್ನುವ ಹಾಗೆ ಬಿಂಬಿಸಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳಲು ಚಿತ್ರ ತಂಡವೊಂದು ಸಿನಿಮಾ ಮಾಡಲು ಹೊರಟಿದ್ದು ಟೈಟಲ್ ರಿಜಿಸ್ಟರ್ ಮಾಡಿಕೊಂಡಿದೆ. ಇದೀಗ ಕನ್ನಡದ ನಿರ್ಮಾಪಕರಾದ ಎ. ಗಣೇಶ್ ಅವರು ಈ ಸಿನಿಮಾ ನಾನು ಮಾಡ್ತಿದ್ದೇನೆ ಎಂದು ಹೇಳಿಕೆ ನೀಡಿದ್ದು ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಮೂಡಿಸಿದೆ. .
In the backdrop of national discussions around controversial films like The Kashmir Files and The Kerala Story, a new Kannada film titled Dharmasthala Files is now in the pipeline. Kannada film producer A. Ganesh has announced the project and confirmed that the title has already been registered with the Film Chamber of Commerce.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm