ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm