ಬ್ರೇಕಿಂಗ್ ನ್ಯೂಸ್
01-08-25 11:34 pm Mangaluru Correspondent ಕರ್ನಾಟಕ
ಬೆಂಗಳೂರು, ಆ.1: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೇನೆಂಬ ವ್ಯಕ್ತಿಯ ದೂರಿನ ನೆಪದಲ್ಲಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ವಿಧಿಸಲಾಗಿದ್ದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿದೆ.
ಧರ್ಮಸ್ಥಳ ಮತ್ತು ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಇತ್ತೀಚಿಗೆ ಆದೇಶ ಹೊರಡಿಸಿತ್ತು. ಜೊತೆಗೆ ಇದಕ್ಕೆ ಸಂಬಂಧಪಟ್ಟ 8 ಸಾವಿರ ಸುದ್ದಿ ಲಿಂಕ್ ಗಳನ್ನು ಡಿಲೀಟ್ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಕೆಲವು ಯುಟ್ಯೂಬ್ ಚಾನೆಲ್ಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಆ ಬಳಿಕ ಹೈಕೋರ್ಟ್ಗೆ ತೆರಳುವಂತೆ ಸೂಚಿಸಲಾಗಿತ್ತು. ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿದ್ದು ನಿರ್ಬಂಧ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ನಡೆಸಿದ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಕುಡ್ಲ ರ್ಯಾಂಪೇಜ್ ಯೂಟ್ಯೂಬ್ ಚಾನೆಲ್ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಮಾಧ್ಯಮಗಳ ನಿರ್ಬಂಧ ಆದೇಶ ತೆರವುಗೊಳಿಸಿತು. ಅಲ್ಲದೆ, ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ. ಮಾಧ್ಯಮಗಳು ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡುತ್ತಿರುವುದನ್ನು ವಿರೋಧಿಸಿ ಹರ್ಷೇಂದ್ರ ಕುಮಾರ್ ಬೆಂಗಳೂರು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದರು.
The Karnataka High Court has lifted the interim media gag order that had restrained the press from publishing or broadcasting news related to Dharmasthala Dharmadhikari Veerendra Heggade and his family member Harshendra Kumar in connection with the ongoing investigation into alleged buried human remains near the Nethravathi river.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm