ಬ್ರೇಕಿಂಗ್ ನ್ಯೂಸ್
03-08-25 09:30 pm HK News Desk ಕರ್ನಾಟಕ
ಬಾಗಲಕೋಟೆ, ಆ.3 : ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಮುಖ್ಯಮಂತ್ರಿ ಆಗುತ್ತೇವೆ. ನಾನು 1980ರಲ್ಲೇ ಸಿಎಂ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಸಿಎಂ ಸ್ಥಾನ ಸಿಗಲಿಲ್ಲ. ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 1979 ರಿಂದ 1995 ರವರೆಗೆ ನಾನೇ ಪಕ್ಷದ ಸಂಘಟನೆ ಮಾಡಿದ್ದೆ. ಆದರೆ ಆಗ ನನ್ನ ಬದಲು ಆರ್ ಗುಂಡೂರಾವ್ ಸಿಎಂ ಆದರು, ನಂತರ ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟಿಲ್ ಸಿಎಂ ಆದರು. ಹಾಗಂತ ನನಗೆ ಸಿಗಲಿಲ್ಲ ಎಂದು ನಾನು ಪಶ್ಚಾತ್ತಾಪ ಪಡಲಿಲ್ಲ ಎಂದು ಹೇಳುವ ಮೂಲಕ ಖರ್ಗೆ ಮಾತಿಗೆ ಟಾಂಗ್ ಇಟ್ಟಿದ್ದಾರೆ.
ನನ್ನಿಂದಲೇ ಪಕ್ಷದ ಅಧಿಕಾರಕ್ಕೆ ಬಂತು ಎಂದು ಹೇಳಲು ಆಗುವುದಿಲ್ಲ. ಎಷ್ಟು ವರ್ಷ ಸಿಎಂ ಆಗಿದ್ದೇವೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಿವಿಮಾತು ಹೇಳಿದ್ದಾರೆ.
ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು, ಪೈಪೋಟಿ ಇರುವುದು ಸಾಮಾನ್ಯ. ಕೆಲವರಿಗೆ ಸಿಗುತ್ತದೆ ಕೆಲವರಿಗೆ ಸಿಗುವುದಿಲ್ಲ. ಸಾಯುವವರೆಗೂ ಕೆಲವರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸಿಗುವುದಿಲ್ಲ. ಆದರೆ ಆಧಿಕಾರವನ್ನು ವಾಮಮಾರ್ಗದ ಮೂಲಕ ಸಾಧಿಸಬಾರದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಈಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಅವರಿಗೆ ಆ ಆಸೆ ಇದೆ, ಅದರ ಬಗ್ಗೆ ತಪ್ಪು ತಿಳಿದುಕೊಳ್ಳಲು ಆಗುವುದಿಲ್ಲ. ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ ಕೆಲವೊಂದು ಸಾರಿ ಡೆಪ್ಯುಟಿ ಸಿಎಂ ಆದವರು ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಅಂತ ಪಶ್ಚಾತ್ತಾಪ ಪಡುವುದು ಬೇಡ ಎಂದು ತಿಳಿಸಿದರು.
Senior Congress leader and former Chief Minister Veerappa Moily has responded to Mallikarjun Kharge’s recent comments about being denied the Chief Minister’s post despite bringing the party to power. Moily stated that in politics, power does not always come to those who expect it, and one must not regret such missed opportunities.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm