ಬ್ರೇಕಿಂಗ್ ನ್ಯೂಸ್
03-08-25 09:30 pm HK News Desk ಕರ್ನಾಟಕ
ಬಾಗಲಕೋಟೆ, ಆ.3 : ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಮುಖ್ಯಮಂತ್ರಿ ಆಗುತ್ತೇವೆ. ನಾನು 1980ರಲ್ಲೇ ಸಿಎಂ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಸಿಎಂ ಸ್ಥಾನ ಸಿಗಲಿಲ್ಲ. ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 1979 ರಿಂದ 1995 ರವರೆಗೆ ನಾನೇ ಪಕ್ಷದ ಸಂಘಟನೆ ಮಾಡಿದ್ದೆ. ಆದರೆ ಆಗ ನನ್ನ ಬದಲು ಆರ್ ಗುಂಡೂರಾವ್ ಸಿಎಂ ಆದರು, ನಂತರ ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟಿಲ್ ಸಿಎಂ ಆದರು. ಹಾಗಂತ ನನಗೆ ಸಿಗಲಿಲ್ಲ ಎಂದು ನಾನು ಪಶ್ಚಾತ್ತಾಪ ಪಡಲಿಲ್ಲ ಎಂದು ಹೇಳುವ ಮೂಲಕ ಖರ್ಗೆ ಮಾತಿಗೆ ಟಾಂಗ್ ಇಟ್ಟಿದ್ದಾರೆ.
ನನ್ನಿಂದಲೇ ಪಕ್ಷದ ಅಧಿಕಾರಕ್ಕೆ ಬಂತು ಎಂದು ಹೇಳಲು ಆಗುವುದಿಲ್ಲ. ಎಷ್ಟು ವರ್ಷ ಸಿಎಂ ಆಗಿದ್ದೇವೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಿವಿಮಾತು ಹೇಳಿದ್ದಾರೆ.
ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು, ಪೈಪೋಟಿ ಇರುವುದು ಸಾಮಾನ್ಯ. ಕೆಲವರಿಗೆ ಸಿಗುತ್ತದೆ ಕೆಲವರಿಗೆ ಸಿಗುವುದಿಲ್ಲ. ಸಾಯುವವರೆಗೂ ಕೆಲವರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸಿಗುವುದಿಲ್ಲ. ಆದರೆ ಆಧಿಕಾರವನ್ನು ವಾಮಮಾರ್ಗದ ಮೂಲಕ ಸಾಧಿಸಬಾರದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಈಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಅವರಿಗೆ ಆ ಆಸೆ ಇದೆ, ಅದರ ಬಗ್ಗೆ ತಪ್ಪು ತಿಳಿದುಕೊಳ್ಳಲು ಆಗುವುದಿಲ್ಲ. ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ ಕೆಲವೊಂದು ಸಾರಿ ಡೆಪ್ಯುಟಿ ಸಿಎಂ ಆದವರು ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಅಂತ ಪಶ್ಚಾತ್ತಾಪ ಪಡುವುದು ಬೇಡ ಎಂದು ತಿಳಿಸಿದರು.
Senior Congress leader and former Chief Minister Veerappa Moily has responded to Mallikarjun Kharge’s recent comments about being denied the Chief Minister’s post despite bringing the party to power. Moily stated that in politics, power does not always come to those who expect it, and one must not regret such missed opportunities.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am