ಬ್ರೇಕಿಂಗ್ ನ್ಯೂಸ್
04-08-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಆ 04 : ಕೇವಲ 14 ವರ್ಷದ ಶಾಲಾ ಬಾಲಕ ಓರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟು ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನ ಗಾಂದಾರ್ ಎಂದು ಗುರುತಿಸಲಾಗಿದೆ.
7ನೇ ತರಗತಿಯಲ್ಲಿ ಓದುತ್ತಿದ್ದ ಗಾಂದಾರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗಾಂದಾರ್ ತಂದೆ ಬೆಳಗ್ಗೆ ಎದ್ದು ಮಗನ ರೂಮಿಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಅಲ್ಲೇ ಇದ್ದ ಡೆತ್ನೋಟ್ ಕಂಡು ಆಘಾತಕ್ಕೊಳಗಾಗಿದ್ದಾರೆ. ಇನ್ನೂ ಗಾಂದಾರ್ ತಾಯಿ ಕೂಡ ಗಾಯಕಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ.
ಡೆತ್ ನೋಟಿನಲ್ಲಿ ಏನಿದೆ ;
"ಪ್ರೀತಿಯ ಕುಟುಂಬದವರೇ, ನಾನು ಈಗ ಸ್ವರ್ಗದಲ್ಲಿದ್ದೇನೆ. ಯಾರೂ ನನ್ನನ್ನು ತಪ್ಪಾಗಿ ಭಾವಿಸಬೇಡಿ. ನನಗೆ ನಿಮ್ಮ ನೋವು ಗೊತ್ತು. ನಾನು ಈ ಕೆಲಸ ಮಾಡಿಕೊಳ್ಳುವ ಕಾರಣ, ಈ ಮನೆ ಇನ್ನಷ್ಟು ಬೆಳಗಲಿ ಎಂಬ ಆಶಯ. ನನ್ನ ಉದ್ದೇಶ ಸಾವಾಗಿರಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ. ಇದು ನನ್ನ ನಿರ್ಧಾರ. ನಾನು ಈ 14 ವರ್ಷ ಸಂತೋಷದಿಂದ ಕಳೆದಿದ್ದೇನೆ. ಮುಂದೆ ಕೂಡ ಸಂತೋಷವಾಗಿರುತ್ತೇನೆ, ನನ್ನ ಸ್ನೇಹಿತರಿಗೆ ಹೇಳಿ, ನಾನು ಖುಷಿಯಾಗಿದ್ದೇನೆ. ಗುಡ್ ಬಾಯ್ ಅಮ್ಮ..." ಎಂದು ಅಕ್ಷರಶಃ ಮನಕಲಕುವ ರೀತಿಯಲ್ಲಿ ಪತ್ರ ಬರೆದಿದ್ದಾನೆ.
ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ತಂದೆ ಗಣೇಶ್ ಪ್ರಸಾದ್, ಬೆಳಗ್ಗೆ ಮಗನ ಕೋಣೆಗೆ ಹೋದಾಗ ಈ ದೃಶ್ಯ ಕಂಡು ಶಾಕ್ ಆಗಿದ್ದಾರೆ. ತಕ್ಷಣವೇ ಅವರು ಮಗನನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಷ್ಟರಲ್ಲಿ ಆತನ ಉಸಿರು ನಿಂತಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪೊಲೀಸ್ ತನಿಖೆ ಆರಂಭ ;
ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ಆರಂಭಿಸಿದ್ದಾರೆ. ಡೆತ್ ನೋಟ್ನ ಅರ್ಥವನ್ನು ಪರಿಶೀಲಿಸಲಾಗುತ್ತಿದೆ. ಮಗನ ಮೇಲೆ ಯಾರಾದರೂ ಒತ್ತಡ ಹಾಕಿದರಾ? ಅಥವಾ ಶಾಲೆಯೊಂದಿಗಿನ ಸಂಬಂಧಿತ ಕಾರಣ ಇದೆಯಾ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?
ಇನ್ನು ಬಾಲಕ ಆತ್ಮಹತ್ಯೆಗೆ ಯಾಕೆ ಶರಣಾದ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ಕೆಲವು ಮೂಲಗಳ ಪ್ರಕಾರ ಆತ ತನ್ನ ಮನಸ್ಸಿನಲ್ಲಿ ಯಾವುದೋ ನೋವು ಹೊತ್ತುಕೊಂಡಿದ್ದ ಎಂದು ಶಂಕಿಸಲಾಗಿದೆ. ಸೋಶಿಯಲ್ ಮೀಡಿಯಾದ ಪ್ರಭಾವ, ಶೈಕ್ಷಣಿಕ ಒತ್ತಡ, ಅಥವಾ ವೈಯಕ್ತಿಕ ಸಮಸ್ಯೆಗಳಿಗೂ ಸಂಬಂಧವಿರಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
In a tragic incident, a 14-year-old schoolboy died by suicide at his home in the CK Achukattu area of Bengaluru. The deceased has been identified as Gandhar, a 7th-grade student.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm