ಬ್ರೇಕಿಂಗ್ ನ್ಯೂಸ್
04-08-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಆ 04 : ಕೇವಲ 14 ವರ್ಷದ ಶಾಲಾ ಬಾಲಕ ಓರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟು ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನ ಗಾಂದಾರ್ ಎಂದು ಗುರುತಿಸಲಾಗಿದೆ.
7ನೇ ತರಗತಿಯಲ್ಲಿ ಓದುತ್ತಿದ್ದ ಗಾಂದಾರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗಾಂದಾರ್ ತಂದೆ ಬೆಳಗ್ಗೆ ಎದ್ದು ಮಗನ ರೂಮಿಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಅಲ್ಲೇ ಇದ್ದ ಡೆತ್ನೋಟ್ ಕಂಡು ಆಘಾತಕ್ಕೊಳಗಾಗಿದ್ದಾರೆ. ಇನ್ನೂ ಗಾಂದಾರ್ ತಾಯಿ ಕೂಡ ಗಾಯಕಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ.
ಡೆತ್ ನೋಟಿನಲ್ಲಿ ಏನಿದೆ ;
"ಪ್ರೀತಿಯ ಕುಟುಂಬದವರೇ, ನಾನು ಈಗ ಸ್ವರ್ಗದಲ್ಲಿದ್ದೇನೆ. ಯಾರೂ ನನ್ನನ್ನು ತಪ್ಪಾಗಿ ಭಾವಿಸಬೇಡಿ. ನನಗೆ ನಿಮ್ಮ ನೋವು ಗೊತ್ತು. ನಾನು ಈ ಕೆಲಸ ಮಾಡಿಕೊಳ್ಳುವ ಕಾರಣ, ಈ ಮನೆ ಇನ್ನಷ್ಟು ಬೆಳಗಲಿ ಎಂಬ ಆಶಯ. ನನ್ನ ಉದ್ದೇಶ ಸಾವಾಗಿರಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ. ಇದು ನನ್ನ ನಿರ್ಧಾರ. ನಾನು ಈ 14 ವರ್ಷ ಸಂತೋಷದಿಂದ ಕಳೆದಿದ್ದೇನೆ. ಮುಂದೆ ಕೂಡ ಸಂತೋಷವಾಗಿರುತ್ತೇನೆ, ನನ್ನ ಸ್ನೇಹಿತರಿಗೆ ಹೇಳಿ, ನಾನು ಖುಷಿಯಾಗಿದ್ದೇನೆ. ಗುಡ್ ಬಾಯ್ ಅಮ್ಮ..." ಎಂದು ಅಕ್ಷರಶಃ ಮನಕಲಕುವ ರೀತಿಯಲ್ಲಿ ಪತ್ರ ಬರೆದಿದ್ದಾನೆ.
ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ತಂದೆ ಗಣೇಶ್ ಪ್ರಸಾದ್, ಬೆಳಗ್ಗೆ ಮಗನ ಕೋಣೆಗೆ ಹೋದಾಗ ಈ ದೃಶ್ಯ ಕಂಡು ಶಾಕ್ ಆಗಿದ್ದಾರೆ. ತಕ್ಷಣವೇ ಅವರು ಮಗನನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಷ್ಟರಲ್ಲಿ ಆತನ ಉಸಿರು ನಿಂತಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪೊಲೀಸ್ ತನಿಖೆ ಆರಂಭ ;
ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ಆರಂಭಿಸಿದ್ದಾರೆ. ಡೆತ್ ನೋಟ್ನ ಅರ್ಥವನ್ನು ಪರಿಶೀಲಿಸಲಾಗುತ್ತಿದೆ. ಮಗನ ಮೇಲೆ ಯಾರಾದರೂ ಒತ್ತಡ ಹಾಕಿದರಾ? ಅಥವಾ ಶಾಲೆಯೊಂದಿಗಿನ ಸಂಬಂಧಿತ ಕಾರಣ ಇದೆಯಾ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?
ಇನ್ನು ಬಾಲಕ ಆತ್ಮಹತ್ಯೆಗೆ ಯಾಕೆ ಶರಣಾದ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ಕೆಲವು ಮೂಲಗಳ ಪ್ರಕಾರ ಆತ ತನ್ನ ಮನಸ್ಸಿನಲ್ಲಿ ಯಾವುದೋ ನೋವು ಹೊತ್ತುಕೊಂಡಿದ್ದ ಎಂದು ಶಂಕಿಸಲಾಗಿದೆ. ಸೋಶಿಯಲ್ ಮೀಡಿಯಾದ ಪ್ರಭಾವ, ಶೈಕ್ಷಣಿಕ ಒತ್ತಡ, ಅಥವಾ ವೈಯಕ್ತಿಕ ಸಮಸ್ಯೆಗಳಿಗೂ ಸಂಬಂಧವಿರಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
In a tragic incident, a 14-year-old schoolboy died by suicide at his home in the CK Achukattu area of Bengaluru. The deceased has been identified as Gandhar, a 7th-grade student.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm