ಬ್ರೇಕಿಂಗ್ ನ್ಯೂಸ್
05-08-25 12:44 pm HK News Desk ಕರ್ನಾಟಕ
ತುಮಕೂರು, ಆ 04 : ಬರೋಬ್ಬರಿ 19 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ರೈತರು ಬೆಳ್ಳಂ ಬೆಳಗ್ಗೆ ತಮ್ಮ ಹೊಲಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ನವಿಲುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ರೈತರು ನವಿಲುಗಳು ಮೃತಪಟ್ಟಿರುವ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ನವಿಲುಗಳ ಮೃತದೇಹವನ್ನು ಪ್ರಾಥಮಿಕ ಪರೀಕ್ಷೆಗಾಗಿ ಸ್ಥಳೀಯ ಪಶುಪಾಲನ ಇಲಾಖೆ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ ಕೆರೆ ಕೋಡಿ ಜಲಪಾತದ ಬಳಿ ಆಗಸ್ಟ್ 2 ರಂದು ನವಿಲಿನ ಮೊದಲ ಕಳೇಬರ ಪತ್ತೆಯಾಗಿತ್ತು. ಬಳಿಕ ಐದು ಗಂಡು ಮತ್ತು 14 ಹೆಣ್ಣು ನವಿಲುಗಳ ಕಳೇಬರಗಳು ಹೊಲಗಳಲ್ಲಿ ಅಲ್ಲಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಗಸ್ಟ್ 1 ರ ರಾತ್ರಿ ನವಿಲುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನವಿಲುಗಳಿಗೆ ವಿಷ ಇಟ್ಟು ಸಾಯಿಸಿರುವ ಅನುಮಾನ ಬಲವಾಗಿ ವ್ಯಕ್ತವಾಗಿದೆ.
ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ' ಎಂದರು.
ಇತ್ತೀಚೆಗೆ ಚಾಮರಾಜನಗರದಲ್ಲಿ ಕೀಟ ನಾಶಕ ಬಳಸಿ ಐದು ಹುಲಿಗಳ ಕೊಲೆ:
ಚಾಮರಾಜನಗರದ ಹನೂರು ತಾಲೂಕಿನ ಮೀಣ್ಯಂ ಸಮೀಪದ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಜೂನ್ 26 ರಂದು ಐದು ಹುಲಿಗಳು ಸಾವನ್ನಪ್ಪಿದ್ದವು. ತಾಯಿ ಹುಲಿ ಮತ್ತು 4 ಮರಿಗಳು ಅಸುನೀಗಿದ್ದವು. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಪತ್ತೆಯಾಗಿತ್ತು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದರು. ಜೊತೆಗೆ ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಹಲವರನ್ನು ಸಚಿವ ಈಶ್ವರ ಬಿ ಖಂಡ್ರೆ ಅಮಾನತುಗೊಳಿಸಿದ್ದರು.
In a shocking incident, as many as 19 peacocks have been found dead under mysterious circumstances in Hanumanthapura village of Madhugiri taluk, Tumakuru district. Early in the morning, local farmers discovered the lifeless birds scattered across their fields.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm