ಬ್ರೇಕಿಂಗ್ ನ್ಯೂಸ್
05-08-25 12:44 pm HK News Desk ಕರ್ನಾಟಕ
ತುಮಕೂರು, ಆ 04 : ಬರೋಬ್ಬರಿ 19 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ರೈತರು ಬೆಳ್ಳಂ ಬೆಳಗ್ಗೆ ತಮ್ಮ ಹೊಲಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ನವಿಲುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ರೈತರು ನವಿಲುಗಳು ಮೃತಪಟ್ಟಿರುವ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ನವಿಲುಗಳ ಮೃತದೇಹವನ್ನು ಪ್ರಾಥಮಿಕ ಪರೀಕ್ಷೆಗಾಗಿ ಸ್ಥಳೀಯ ಪಶುಪಾಲನ ಇಲಾಖೆ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ ಕೆರೆ ಕೋಡಿ ಜಲಪಾತದ ಬಳಿ ಆಗಸ್ಟ್ 2 ರಂದು ನವಿಲಿನ ಮೊದಲ ಕಳೇಬರ ಪತ್ತೆಯಾಗಿತ್ತು. ಬಳಿಕ ಐದು ಗಂಡು ಮತ್ತು 14 ಹೆಣ್ಣು ನವಿಲುಗಳ ಕಳೇಬರಗಳು ಹೊಲಗಳಲ್ಲಿ ಅಲ್ಲಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಗಸ್ಟ್ 1 ರ ರಾತ್ರಿ ನವಿಲುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನವಿಲುಗಳಿಗೆ ವಿಷ ಇಟ್ಟು ಸಾಯಿಸಿರುವ ಅನುಮಾನ ಬಲವಾಗಿ ವ್ಯಕ್ತವಾಗಿದೆ.
ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ' ಎಂದರು.
ಇತ್ತೀಚೆಗೆ ಚಾಮರಾಜನಗರದಲ್ಲಿ ಕೀಟ ನಾಶಕ ಬಳಸಿ ಐದು ಹುಲಿಗಳ ಕೊಲೆ:
ಚಾಮರಾಜನಗರದ ಹನೂರು ತಾಲೂಕಿನ ಮೀಣ್ಯಂ ಸಮೀಪದ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಜೂನ್ 26 ರಂದು ಐದು ಹುಲಿಗಳು ಸಾವನ್ನಪ್ಪಿದ್ದವು. ತಾಯಿ ಹುಲಿ ಮತ್ತು 4 ಮರಿಗಳು ಅಸುನೀಗಿದ್ದವು. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಪತ್ತೆಯಾಗಿತ್ತು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದರು. ಜೊತೆಗೆ ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಹಲವರನ್ನು ಸಚಿವ ಈಶ್ವರ ಬಿ ಖಂಡ್ರೆ ಅಮಾನತುಗೊಳಿಸಿದ್ದರು.
In a shocking incident, as many as 19 peacocks have been found dead under mysterious circumstances in Hanumanthapura village of Madhugiri taluk, Tumakuru district. Early in the morning, local farmers discovered the lifeless birds scattered across their fields.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm