ಬ್ರೇಕಿಂಗ್ ನ್ಯೂಸ್
08-08-25 06:23 pm HK News Desk ಕರ್ನಾಟಕ
ಮೈಸೂರು, ಆ.8 : ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಧರ್ಮಸ್ಥಳ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವುದು ಇಲ್ಲಿ ಸ್ಪಷ್ಟವಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಒಂದೇ ಒಂದು ಸಾಕ್ಷಿ ಇಲ್ಲದೆ ಯಾಕೆ ವಿರೇಂದ್ರ ಹೆಗ್ಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ? ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ ಇದ್ದೇವೆ. ಅದರ ಬಗ್ಗೆ ಮೂರು ತನಿಖಾ ಸಂಸ್ಥೆಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ.
ಆದರೆ ಈಗ ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಅಂತ ಬಿಂಬಿಸುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ? ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಅಂತ ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿದೆ.
ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದುಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ.
ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ. ಟೆಸ್ಟ್ ಮ್ಯಾಚ್ ಗಿಂತಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಅಲ್ಲಿನ ಧರ್ಮಾಧಿಕಾರಿ ಹೆಗ್ಡೆ ಅವರು ಯಾಕೆ ನಿಮಗೆ ಟಾರ್ಗೆಟ್ ಆಗಿದ್ದಾರೆ. ಅದಕ್ಕು ಮುನ್ನ ಆರೋಪ ಮಾಡಿರುವ ಅನಾಮಿಕ ವ್ಯಕ್ತಿಯ ಪೂರ್ವಾಪರ ಮೊದಲು ಬಹಿರಂಗ ಆಗಲಿ ಎಂದು ಪ್ರತಾಪ್ ಸಿಂಹ ಹೇಳಿದರು.
Former MP Pratap Simha has launched a sharp attack on the Karnataka government over the ongoing investigation into the Dharmasthala human remains case, questioning the motives behind targeting Dharmadhikari Veerendra Heggade.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm