ಬ್ರೇಕಿಂಗ್ ನ್ಯೂಸ್
08-08-25 06:23 pm HK News Desk ಕರ್ನಾಟಕ
ಮೈಸೂರು, ಆ.8 : ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಧರ್ಮಸ್ಥಳ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವುದು ಇಲ್ಲಿ ಸ್ಪಷ್ಟವಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಒಂದೇ ಒಂದು ಸಾಕ್ಷಿ ಇಲ್ಲದೆ ಯಾಕೆ ವಿರೇಂದ್ರ ಹೆಗ್ಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ? ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ ಇದ್ದೇವೆ. ಅದರ ಬಗ್ಗೆ ಮೂರು ತನಿಖಾ ಸಂಸ್ಥೆಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ.
ಆದರೆ ಈಗ ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಅಂತ ಬಿಂಬಿಸುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ? ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಅಂತ ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿದೆ.
ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದುಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ.
ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ. ಟೆಸ್ಟ್ ಮ್ಯಾಚ್ ಗಿಂತಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಅಲ್ಲಿನ ಧರ್ಮಾಧಿಕಾರಿ ಹೆಗ್ಡೆ ಅವರು ಯಾಕೆ ನಿಮಗೆ ಟಾರ್ಗೆಟ್ ಆಗಿದ್ದಾರೆ. ಅದಕ್ಕು ಮುನ್ನ ಆರೋಪ ಮಾಡಿರುವ ಅನಾಮಿಕ ವ್ಯಕ್ತಿಯ ಪೂರ್ವಾಪರ ಮೊದಲು ಬಹಿರಂಗ ಆಗಲಿ ಎಂದು ಪ್ರತಾಪ್ ಸಿಂಹ ಹೇಳಿದರು.
Former MP Pratap Simha has launched a sharp attack on the Karnataka government over the ongoing investigation into the Dharmasthala human remains case, questioning the motives behind targeting Dharmadhikari Veerendra Heggade.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am