ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm