ಬ್ರೇಕಿಂಗ್ ನ್ಯೂಸ್
10-08-25 09:12 pm HK News Desk ಕರ್ನಾಟಕ
ಕೊಪ್ಪಳ, ಆ.10: ಅನ್ಯಧರ್ಮದ ಯುವತಿಯನ್ನು ಹಿಂದೂ ಯುವಕ 30 ವರ್ಷದ ಗವಿ ಸಿದ್ದಪ್ಪ ನಾಯಕ್ ಎಂಬ ಯುವಕ ಪ್ರೀತಿಸುತ್ತಿದ್ದ ಎಂಬುದಕ್ಕೆ ಮುಸ್ಲಿಂ ಯುವಕನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಸಾದಿಕ್ ಎಂಬಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿ ತಾನೇ ಕೃತ್ಯ ಎಸಗಿದ್ದಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇದೀಗ ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮುಸ್ಲಿಂ ಯುವತಿಯರನ್ನ ಮದುವೆಯಾದರೆ 5 ಲಕ್ಷ ನೀಡುವುದಾಗಿ ಕರೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಈ ಘಟನೆಯನ್ನು "ಲವ್ ಜಿಹಾದ್" ಎಂದು ಬಣ್ಣಿಸಿ, ಸರ್ಕಾರವು ಹಿಂದುಗಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂಪಾಯಿ; ಯತ್ನಾಳ್
ಕೊಲೆಯಾದ ಗವಿಸಿದ್ದಪ್ಪ ನಾಯಕ್ ಮನೆಗೆ ಭೇಟಿಯಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಯತ್ನಾಳ್, ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಅಭಿಯಾನವನ್ನೂ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಹಿಂದುಗಳಿಗೆ ರಕ್ಷಣೆಯೇ ಇಲ್ಲ; ಯತ್ನಾಳ್
ಯತ್ನಾಳ್ ಈ ಘಟನೆಯನ್ನು "ಲವ್ ಜಿಹಾದ್" ಎಂದು ಕರೆದಿದ್ದಾರೆ. "ಹಿಂದುಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಂರಲ್ಲಿದೆ" ಎಂದು ಆರೋಪಿಸಿರುವ ಅವರು, ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ. "ಈ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ" ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಸೀದಿಯ ಮುಂದೆಯೇ ಗವಿಸಿದ್ದಪ್ಪ ಕೊಲೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಯಾರೂ ಯಾಕೆ ತಡೆಯಲಿಲ್ಲ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ, ಈಗಾಗಲೇ ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಸಾಂತ್ವಾನ ಹೇಳಿದರೆ ಸಾಲದು ಕುಟುಂಬದ ನೆರವಿಗೆ ಬರಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾಬರ ಸರ್ಕಾರವಾಗಿಬಿಟ್ಟಿದೆ ; ಯತ್ನಾಳ್
ಯತ್ನಾಳ್ ಈ ಘಟನೆಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ. "ಸರ್ಕಾರವು ಸಾಬರ ಸರ್ಕಾರವಾಗಿದೆ, ಮಚ್ಚು ತೆಗೆದುಕೊಂಡು ಓಡಾಡುವವರಿಗೆ ಬೆಂಬಲವಿದೆ" ಎಂದು ಟೀಕಿಸಿದ್ದಾರೆ. "ನನ್ನ ಫೋಟೊ ಹಿಡಿದವರಿಗೆ ಪ್ರಾಣ ಹೋದರೆ ಭಯಪಡುತ್ತಾರೆ, ಆದರೆ ಹಿಂದುಗಳಾರೂ ಭಯಪಡುವುದಿಲ್ಲ" ಎಂದು ಹೇಳಿದ್ದಾರೆ.
BJP MLA from Vijayapura, Basanagouda Patil Yatnal, has sparked controversy by announcing ₹5 lakh as an incentive to Hindu men who marry Muslim women, following his visit to the family of Gavisiddappa Naik – a 30-year-old Hindu man recently murdered in Koppal district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm