ಬ್ರೇಕಿಂಗ್ ನ್ಯೂಸ್
11-08-25 03:29 pm Bangalore Correspondent ಕರ್ನಾಟಕ
ಬೆಂಗಳೂರು ಆ.11 : ರಾಜ್ಯದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್ಗೆ ಶಾಕ್ ನೀಡಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ನಿಂದ ಆದೇಶ ಬಂದ ಹಿನ್ನೆಲೆಯಲ್ಲಿ ರಾಜಣ್ಣ ಈ ನಿರ್ಧಾರ ಮಾಡಿದ್ಧಾರೆ ಎನ್ನಲಾಗಿದೆ.
ಕೆಲವು ದಿನಗಳಿಂದ ಪಕ್ಷ, ಹೈಕಮಾಂಡ್ ಹಾಗೂ ರಾಜಕೀಯ ವಿಷಯಗಳಿಂದ ದೂರವಿದ್ದ ಕೆ.ಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಬಗ್ಗೆ ಬಹಿರಂಗ ಆರೋಪ ಮಾಡಿದ್ದಕ್ಕೆ, ಕಳೆದ ಬಾರಿ ನಾವು ಇರುವಾಗಲೇ ವೋಟರ್ ಲಿಸ್ಟ್ ಮಾಡಿದ್ದಲ್ವೇ.. ನಾವೇ ನೋಡಿಕೊಳ್ಳಬೇಕಿತ್ತು ಎಂದು ಹೇಳಿ ಕೇಂದ್ರ ನಾಯಕರಿಗೆ ಮುಜುಗರ ತಂದಿದ್ದರು. ಜತೆಗೆ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಒಳಮುನಿಸು ಇತ್ತು. ಇದು ಕೂಡ ರಾಜೀನಾಮೆ ನೀಡಲು ಕಾರಣ ಎನ್ನಲಾಗುತ್ತಿದೆ.
ರಾಜಣ್ಣ ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಿರಿಯ ನಾಯಕ, ಗೃಹ ಸಚಿವರ ಆಪ್ತರ ವಿರುದ್ಧವೇ ಹೈಕಮಾಂಡ್ ಈ ರೀತಿ ಕ್ರಮ ಕೈಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ನೀಡುತ್ತಿದ್ದ ಹೇಳಿಕೆಗಳ ಸಂದರ್ಭ ರಾಜಣ್ಣ ಸಿದ್ದರಾಮಯ್ಯ ಪರ ಬಲವಾಗಿಯೇ ಹೇಳಿಕೆ ನೀಡುತ್ತಿದ್ದರಲ್ಲದೆ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯಲಿದ್ದಾರೆ ಎಂದು ಹೇಳುತ್ತಲೇ ಇದ್ದರು. ಹೀಗಾಗಿ ಡಿಕೆಶಿಗೆ ತೊಡರುಗಾಲಾಗಿದ್ದರು.
ಇತ್ತೀಚೆಗೆ ಮತಗಳವು ವಿಷಯದಲ್ಲಿ ರಾಹುಲ್ ಗಾಂಧಿ ಮಾತನಾಡಿದಾಗ ಅದನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. ಮಹದೇವಪುರದಲ್ಲಿ ಚುನಾವಣಾ ಅಕ್ರಮ ನಡೆದಾಗ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು. ನಮ್ಮದೇ ಲೋಪದಿಂದ ಅಕ್ರಮ ನಡೆದಿತ್ತು ಎಂದು ಅವರು ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿತ್ತು. ಈ ವಿಷಯದಿಂದ ಮುಜುಗರಕ್ಕೊಳಗಾಗಿ ಹೈಕಮಾಂಡ್ ರಾಜಣ್ಣ ರಾಜೀನಾಮೆಗೆ ಸೂಚಿಸಿತ್ತು ಎಂದು ಹೇಳಲಾಗಿದೆ.
Karnataka Cooperation minister KN Rajanna — a known supporter of chief minister (CM) Siddaramaiah — submitted his resignation to Chief Minister Siddaramaiah following a controversy with remarks that drew sharp response from deputy CM DK Shivakumar's supporters.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm