ಬ್ರೇಕಿಂಗ್ ನ್ಯೂಸ್
11-08-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಆ.11 : ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಲ್ಲ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎನ್ನುವುದು ಬಹಿರಂಗವಾಗಿದ್ದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದ್ದು ಅದರಲ್ಲಿಯೇ ಕಿತ್ತುಹಾಕುವ ವಿಚಾರ ಉಲ್ಲೇಖವಾಗಿದೆ.
ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಪತ್ರ ರವಾನೆಯಾಗಿದೆ. ಈ ಪತ್ರದಲ್ಲಿ " ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ " ಎಂದು ಉಲ್ಲೇಖಿಸಲಾಗಿದೆ.


ರಾಜಣ್ಣ ಅವರು ತಮ್ಮನ್ನು ಕಿತ್ತು ಹಾಕುವ ವಿಚಾರ ತಿಳಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಸೋಮವಾರ ಮಧ್ಯಾಹ್ನ ವೇಳೆಗೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳಿಗೆ ನೀಡಿದ್ದರು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ಆರಂಭ ಆಗುತ್ತಿದ್ದಂತೆ ವಿಪಕ್ಷ ನಾಯಕ ಅಶೋಕ್, ಸುರೇಶ್ ಕುಮಾರ್, ರಾಜಣ್ಣ ಅವರು ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಆಕ್ಷೇಪಿಸಿದರು. ನೀವು ರಾಜಿನಾಮೆ ನೀಡಿದ್ದೀರಲ್ವಾ.. ಯಾಕೆ ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂದು ತರಾಟೆ ತೆಗೆದರು. ಆದರೆ, ಆಡಳಿತ ಪಕ್ಷದ ನಾಯಕರು ರಾಜಿನಾಮೆ ನಿರಾಕರಿಸಿದ್ದರು.

ಸಂಜೆಯಾಗುತ್ತಿದ್ದಂತೆ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂಬ ಪತ್ರವು ರಾಜ್ಯಪಾಲರ ಕಚೇರಿಯಿಂದ ಸರ್ಕಾರಕ್ಕೆ ರವಾನೆಯಾಗಿದೆ. ರಾಜಣ್ಣ ರಾಜೀನಾಮೆ ನೀಡುವ ಮುನ್ನವೇ ಸರ್ಕಾರದ ಮುಖ್ಯಸ್ಥರಾದ ಸಿಎಂ ಸಿದ್ದರಾಮಯ್ಯ ಅವರು ವಜಾಕ್ಕೆ ನಿರ್ಧರಿಸಿ ರಾಜಭವನಕ್ಕೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ರಾಜಣ್ಣ ರಾಜಿನಾಮೆ ಬಿಸಾಕಿ ಕಲಾಪದಲ್ಲಿ ಕುಳಿತಿದ್ದರು.
ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ವಿಧಾನಸಭೆ ಕಲಾಪ ಮಧ್ಯಾಹ್ನದ ಭೋಜನ ವಿರಾಮದ ಸಂದರ್ಭದಲ್ಲಿ ಕೆ.ಎನ್ ರಾಜಣ್ಣ ರಾಜೀನಾಮೆ ಬಗ್ಗೆ ವದಂತಿ ಉಂಟಾಗಿದ್ದರಿಂದ ಟಿವಿಯಲ್ಲಿ ಸುದ್ದಿಯಾಗಿತ್ತು.
In a political twist that has stirred debate in Karnataka, senior Congress leader K.N. Rajanna was not a voluntary resignee from his ministerial post, but was in fact removed from the Cabinet on the instructions of the party high command.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm