ಬ್ರೇಕಿಂಗ್ ನ್ಯೂಸ್
12-08-25 07:43 pm HK News Desk ಕರ್ನಾಟಕ
ಗದಗ, ಆ.12 : ಧರ್ಮಸ್ಥಳದಲ್ಲಿ ಈಗೇನು ನಡೆಯುತ್ತಿದೆಯೋ ಅದನ್ನೆಲ್ಲಾ ಮಂಜುನಾಥ ಸ್ವಾಮಿಯೇ ಮಾಡಿಸುತ್ತಿರಬೇಕು. ಅಲ್ಲಿ ನಡೆಯುತ್ತಿರುವ ಘಟನೆ ಸತ್ಯವೋ ಸುಳ್ಳೋ ಅದು ಇಂದಲ್ಲ ನಾಳೆ ಹೊರಗೆ ಬರುತ್ತದೆ. ರಾಜಾಜ್ಞೆ ಆಗಿದೆ ಸತ್ಯ ಹೊರಬರಲು ಸಮಯಾವಕಾಶ ಬೇಕಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಪ್ರಸಕ್ತ ವಿದ್ಯಮಾನಗಳ ಬಗ್ಗೆ ಭವಿಷ್ಯ ನುಡಿಯುವುದರಲ್ಲಿ ಪ್ರಸಿದ್ದಿ ಹೊಂದಿರುವ ಹಾಸನ ಜಿಲ್ಲೆ ಅರಸೀಕೆರೆ ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಗದಗದಲ್ಲಿ ಮಾತನಾಡಿದ್ದಾರೆ. "ಸೀತೆಗೆ ರಾಮಾಯಣದಲ್ಲಿ ಆದಂತೆ, ಇಲ್ಲಿ ಅಪಪ್ರಚಾರ ಮೊದಲು ಬಂದಿದೆ, ಇದೇ ಪ್ರಬಲವಾಗಿದೆ. ಪ್ರಚಾರ, ವಿಚಾರ, ಸಮಾಚಾರ, ಅಪಪ್ರಚಾರ. ಅಪಪ್ರಚಾರ ಮಾಡಿದವನು ಕೊನೆಗೆ ಸತ್ತೇ ಹೋಗುತ್ತಾನೆ" ಎಂದು ಕೋಡಿಶ್ರೀಗಳು ಹೇಳಿದ್ದಾರೆ.
ಸತ್ಯ ಹೊರ ಬರುತ್ತದೆ, ಬೆಳಕು ಇದ್ದಲ್ಲಿ ಕತ್ತಲು ಇರುತ್ತದೆ, ಬೆಳಕು ಬಂದಾಗ ಕತ್ತಲು ಹೋಗುತ್ತದೆ, ನಾನು ಯಾರನ್ನೂ ದೂಷಣೆ ಮಾಡಲು ಹೋಗುವುದಿಲ್ಲ. ಒಳ್ಳೊಳ್ಳೆ ಗುಡಿಗಳ ಪೂಜೆಗಳು ನಿಲ್ಲುತ್ತಾ ಬರುತ್ತವೆ ಎಂದು ಕಾಲಜ್ಞಾನದಲ್ಲಿ ಹೇಳಲಾಗಿದೆ. ಎಲ್ಲಿ ನಿಧಿ ಇರುತ್ತೋ, ಅಲ್ಲಿ ವಿಧಿ ಇರುತ್ತದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.
ಊರಲ್ಲಿ ಇರುವ ಸಣ್ಣ ದೇವಸ್ಥಾನಕ್ಕೆ ಯಾರೂ ಹೋಗುವುದಿಲ್ಲ, ಪೂಜಾರಿಗೆ ಸಂಬಳ ಕೊಡಲೇ ದುಡ್ಡು ಇರುವುದಿಲ್ಲ. ದುಡ್ಡು ಬೆಳೆಯುತ್ತಿದ್ದಂತೆಯೇ, ವಿಧಿಯು ಕಾಡಿಕೊಂಡು ಬರುತ್ತದೆ. ಅಭಿಮನ್ಯುವಿನ ಬಿಲ್ಲಿನ ದಾರವನ್ನು ಕರ್ಣ ಕಟ್ ಮಾಡುತ್ತಾನೆ. ಅಭಿಮನ್ಯುವಿನ ಹೆಂಡತಿ ರಂಗಪ್ರವೇಶ ಮಾಡುತ್ತಾಳೆ, ಮಹಾಪಾರ್ಥ, ಭೀಮಸೇನ ಗೆದ್ದ. ಮುಡಾ ಕೇಸ್ ಮುನ್ನಲೆಗೆ ಬಂತು, ಸಿಎಂ ಹೆಂಡತಿ, ಸೈಟ್ ಅನ್ನು ವಾಪಸ್ ಕೊಟ್ಟು ಬಂದರು, ಸಿದ್ದರಾಮಯ್ಯ ಗೆದ್ದರು. ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಇಂತಹ ಕೆಲಸಗಳು ನಡೆಯುತ್ತಿದೆ. ಅಲ್ಲಿ, ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದರು. ಈ ರೀತಿಯ ಸಮಸ್ಯೆಗಳು ಮುಂದಿನ ಸಂಕ್ರಾಂತಿಯ ವರೆಗೆ ಮುಂದುವರಿಯಲಿದೆ. ಜಲ, ವಾಯು, ಅಗ್ನಿ ಸುನಾಮಿ ನಡೆಯಲಿದೆ" ಎನ್ನುವ ಮಾತನ್ನು ಕೋಡಿಶ್ರೀಗಳು ಪುನರುಚ್ಚಿಸಿದ್ದಾರೆ.
ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ, ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ. ಕರಾಳ ಭವಿಷ್ಯ ನಮ್ಮ ಮುಂದಿದೆ, ಸತ್ಯವನ್ನು ಇನ್ನಷ್ಟು ಬಿಚ್ಚಿಟ್ಟರೆ ನಮಗೆ ಸಮಸ್ಯೆ ಆಗಬಹುದು. ದ್ವೇಷ, ಅಸೂಯೆ, ಮತ್ಸರದ ಜಗತ್ತಿನಲ್ಲಿ ನಾವಿದ್ದೇವೆ. ನೀಚನಿಗೆ ದೊರೆತನವು, ಹೇಡಿಗೆ ಹಿರಿತನವು, ಮೂಢನಿಗೆ ಗುರುತನವು ಸಿಕ್ಕರೆ ದೇಶಕ್ಕೆ ಕಷ್ಟ ಎಂದು ಕೋಡಿಶ್ರೀಗಳು ನುಡಿದಿದ್ದಾರೆ.
ಹಿಂದೆಲ್ಲಾ ರಾಜಮಹಾರಾಜರು ಇದ್ದರು, ಅವರ ಪಕ್ಕದಲ್ಲಿ ಗುರುಗಳು ಕೂರುತ್ತಾ ಇದ್ದರು. ಗುರು ಜೊತೆಗಿದ್ದ, ಇದಲ್ಲದೇ ಗುರಿಯೂ ಇತ್ತು, ಹಾಗಾಗಿ ಸಮೃದ್ದವಾಗಿ ರಾಜ್ಯವನ್ನು ಆಳುತ್ತಿದ್ದರು. ಈಗಿನವರಿಗೆ ಗುರುಗಳೂ ಇಲ್ಲ, ಗುರಿಯೂ ಇಲ್ಲ ಎಂದು ರಾಜಕಾರಣಿಗಳನ್ನು ಉದ್ದೇಶಿಸಿ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ.
Commenting on the ongoing developments in Dharmasthala, Sri Shivananda Shivayogi Rajendra Swamiji of Kodimath in Arasikere, Hassan district, said that whatever is happening there must be by the will of Lord Manjunatha himself. Speaking in Gadag, the seer predicted that whether the events are true or false, the truth will come out sooner or later, adding that divine will takes its own time to reveal itself.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 08:34 pm
Mangalore Correspondent
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm