ಬ್ರೇಕಿಂಗ್ ನ್ಯೂಸ್
12-08-25 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆ.12 : ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದ್ದು ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.
ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ನೀಡಿದ್ದ ಕೆಎನ್ ರಾಜಣ್ಣ ತಲೆದಂಡ ಆಗಿದ್ದು, ರಾಜ್ಯ ಸಚಿವ ಸಂಪುಟದಿಂದ ಬಲವಂತದಿಂದ ಕಿತ್ತು ಹಾಕಲಾಗಿದೆ. ಸಿದ್ದರಾಮಯ್ಯ ಆಪ್ತರಾಗಿ ಗುರುತಿಸಿದ್ದ ಅವರನ್ನು ಏಕಾಏಕಿ ಕಿತ್ತು ಹಾಕಿರುವ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 'ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.
ನನ್ನ ಬಳಿ ಇರುವ ಈ ಷಡ್ಯಂತ್ರ, ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ
ಇದೇ ವೇಳೆ 'ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
A day after being dropped from Chief Minister Siddaramaiah’s cabinet, former Karnataka Minister K.N. Rajanna has alleged that a “major conspiracy” was behind his removal, claiming he knows exactly who orchestrated it.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm