ಬ್ರೇಕಿಂಗ್ ನ್ಯೂಸ್
12-08-25 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆ.12 : ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದ್ದು ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.
ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ನೀಡಿದ್ದ ಕೆಎನ್ ರಾಜಣ್ಣ ತಲೆದಂಡ ಆಗಿದ್ದು, ರಾಜ್ಯ ಸಚಿವ ಸಂಪುಟದಿಂದ ಬಲವಂತದಿಂದ ಕಿತ್ತು ಹಾಕಲಾಗಿದೆ. ಸಿದ್ದರಾಮಯ್ಯ ಆಪ್ತರಾಗಿ ಗುರುತಿಸಿದ್ದ ಅವರನ್ನು ಏಕಾಏಕಿ ಕಿತ್ತು ಹಾಕಿರುವ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 'ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.
ನನ್ನ ಬಳಿ ಇರುವ ಈ ಷಡ್ಯಂತ್ರ, ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ
ಇದೇ ವೇಳೆ 'ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
A day after being dropped from Chief Minister Siddaramaiah’s cabinet, former Karnataka Minister K.N. Rajanna has alleged that a “major conspiracy” was behind his removal, claiming he knows exactly who orchestrated it.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm