ಬ್ರೇಕಿಂಗ್ ನ್ಯೂಸ್
14-08-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಆ 14 : ಸದನದಲ್ಲಿ ನಿಯಮ 69 ಅಡಿಯಲ್ಲಿ ಧರ್ಮಸ್ಥಳದ ಬಗ್ಗೆ ನಡೆದ ಚರ್ಚೆಯಲ್ಲಿ ವಿಪಕ್ಷ ಸದಸ್ಯರ ಆರೋಪಗಳಿಗೆ ಉತ್ತರ ನೀಡಿದ ಡಿಕೆ ಶಿವಕುಮಾರ್, ನಾನು ಧರ್ಮಸ್ಥಳದ ಪರವಾಗಿದ್ದೇನೆ ಎಂದರ
ಮೈ ಸ್ಟಾಂಡ್ ಆನ್ ಧರ್ಮಸ್ಥಳ, My Believe ಐಸ್ ಮಂಜುನಾಥ ! ಹೀಗೆ ವಿಧಾನಸಭೆಯಲ್ಲಿ ಧರ್ಮಸ್ಥಳದ ಪರವಾಗಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದು ಡಿಸಿಎಂ ಡಿಕೆ ಶಿವಕುಮಾರ್
ನನಗೆ ಮಾತು ತಪ್ಪದ ಮಂಜುನಾಥ ಹಾಗೂ ಧರ್ಮಸ್ಥಳದ ಬಗ್ಗೆ ನಂಬಿಕೆ ಇದೆ. ನಿಮಗಿಂತ ಜಾಸ್ತಿ ನಮ್ಮ ಪಾರ್ಟಿಯಲ್ಲೇ ಕೂಗು ಇದೆ, ಧರ್ಮಸ್ಥಳ ಗೌರವಕ್ಕೆ ಕೂಗು ಇದೆ. ಕರ್ನಾಟಕ ಸರ್ಕಾರ ಧಾರ್ಮಿಕ ರಕ್ಷಣೆ ಕೊಡಲಿದೆ. ಕೆಲವರು ಬಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದರು. ನಮ್ಮ ನಡೆ ಸ್ಪಷ್ಟ ಇದೆ, ಧರ್ಮಸ್ಥಳ, ವೀರೇಂದ್ರ ಹೆಗಡೆ ಅವರ ಬಗ್ಗೆ ಗೌರವ ಇದೆ, ಅವರ ಪರ ಇರುತ್ತೇವೆ. ರಾಜಕೀಯಕ್ಕೆ ಲಿಂಕ್ ಮಾಡಬೇಡಿ ಎಂದು ಮನವಿ ಮಾಡಿದರು.
ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ:
ಇನ್ನು ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. "ಎಸ್ ಐ ಟಿ ರಚನೆ ಮಾಡಲು ನ್ಯಾಯಾಲಯ ಹೇಳಿತ್ತಾ? ಎಸ್ ಐ ಟಿ ರಚನೆ ಮಾಡಲು ಹೇಳಿದ ಗ್ಯಾಂಗ್ ಯಾವುದು? ಬೆಟ್ಟ ಅಗೆದು ಇಲಿ ಹಿಡಿದಂತಾಯಿತು" ಎಂದು ಕಿಡಿಕಾರಿದರು.
ಮಾಸ್ಕ್ ಮ್ಯಾನ್ ಹಿಂದೆ ಯಾರಿದ್ದಾರೆ? ಸೌಜನ್ಯ ಹತ್ಯೆ ತನಿಖೆ ಆಗಲಿ. ಆದರೆ ಮಂಜುನಾಥ ಕ್ಷೇತ್ರ ಏನು ತಪ್ಪುಮಾಡಿದೆ? ಧಾರ್ಮಿಕ ಕ್ಷೇತ್ರಗಳನ್ನು ಮುಗಿಸುವ ಪ್ರಯತ್ನ ಆಗುತ್ತಿದೆ ಎಂದು ಆರೋಪ ಮಾಡಿದರು. ಹಿಂದೂಗಳ ದೇವರನ್ನು ಮುಗಿಸುವ ಪಿತೂರಿ ಮಾಡುತಿದ್ದಾರೆ. ಧರ್ಮಸ್ಥಳದ ಪಾವಿತ್ರತೆಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.
ಸುಜಾತ ಭಟ್ ಎಂಬಾಕೆ ನನ್ನ ಮಗಳು ಕಾಣೆಯಾಗಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ಆದರೆ ಅಂತಹ ಮಗಳೇ ಇಲ್ಲ ಎಂದು ಹೊರಬಂದಿದೆ ಎಂದು ಆರೋಪಿಸಿದರು.
ಎನ್ ಐ ಎ ತನಿಖೆಗೆ ಆಗ್ರಹ:
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆ ಮಾಡಲಿ ಎಂದು ಆರ್ ಅಶೋಕ್ ಆಗ್ರಹಿಸಿದರು. ದೂರುದಾರ ವ್ಯಕ್ತಿಯನ್ನು ಮಂಪರು ಪರೀಕ್ಷೆ ಮಾಡಲಿ. ಮಾಸ್ಕ್ ಮ್ಯಾನ್ ಗೆ ಬಂದೂಕು ಹಿಡಿದುಕೊಂಡು ಭದ್ರತೆ ನೀಡಲಾಗುತ್ತಿದೆ. ಇವೆಲ್ಲವೂ ಸರ್ಕಾರಿ ಪ್ರಾಯೋಜಿತವಾಗಿದೆ ಎಂದು ಆರೋಪ ಮಾಡಿದರು.
Deputy Chief Minister DK Shivakumar, speaking under Rule 69 during the Legislative Assembly debate on Dharmasthala, strongly defended the revered temple town and its Dharmadhikari Dr. D. Veerendra Heggade. Responding to opposition allegations, Shivakumar declared, “I stand with Dharmasthala. I have faith in Lord Manjunath and respect for Dharmasthala and Veerendra Heggade. Our government will ensure religious protection. Don’t link this to politics.”
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am