ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm