ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm