ಬ್ರೇಕಿಂಗ್ ನ್ಯೂಸ್
18-08-25 01:25 pm Bangalore Correspondent ಕರ್ನಾಟಕ
ಬೆಂಗಳೂರು, ಆ 18 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರಿದಿದೆ. ಆದರೆ ಎಸ್ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರೀ ಪರ - ವಿರೋಧ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ಎಸ್ಐಟಿ ತನಿಖೆ ನಡೆಸುವುದಕ್ಕೆ ಆ ಅಯೋಗ್ಯ ಹೇಳಿರುವುದೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಹ್ಲಾದ್ ಜೋಶಿ ಅವರು ಯಾರನ್ನು ಅಯೋಗ್ಯ ಎಂದರು ಹಾಗೂ ಧರ್ಮಸ್ಥಳ ವಿಚಾರವಾಗಿ ಅವರು ಮಾತನಾಡಿದ ಸ್ಫೋಟಕ ವಿಚಾರಗಳು ಏನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಧರ್ಮಸ್ಥಳ ವಿಚಾರವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ ಅಂತಾರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ವಿವಿಧ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆ ವಿಷಯದ ಬಗ್ಗೆ ಎಸ್ಐಟಿ ತನಿಖೆ ಮುಂದುವರಿದಿದೆ. ವಿವಿಧ ಜಾಗಗಳಲ್ಲಿ ಉತ್ಖನನ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ರೀತಿ ಇರುವಾಗಲೇ ಮಹತ್ವದ ಮಾಹಿತಿಯನ್ನು ಪ್ರಹ್ಲಾದ್ ಜೋಶಿ ಹಂಚಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಹಾಗೂ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಮುಸ್ಲಿಂ ಲೀಗ್ ಸೇರಿದಂತೆ ಹಲವು ಹಿಂದೂ ವಿರೋಧಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗ್ರೆಸ್ ದೇಶದಲ್ಲಿಯೇ ಹಿಂದೂ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ನಡೆಸಿದೆ ಎನ್ನುವ ಗಂಭೀರವಾದ ಆರೋಪವನ್ನು ಪ್ರಹ್ಲಾದ್ ಜೋಶಿ ಮಾಡಿದ್ದಾರೆ.
ಯಾರೋ ಅಯೋಗ್ಯ ಹೇಳಿದಾ ಅಂತಾ ಧರ್ಮಸ್ಥಳ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಕೊಟ್ಟಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆ. ಈ ರೀತಿಯ ಅಯೋಗ್ಯರು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಎನ್ನುವುದೇ ಇಲ್ಲ. ಇವರು ಎರಡು ದೋಣಿಗಳ ಮೇಲೆ ಕಾಲಿರಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೇಳಿಕೆಗಳೇ ಉದಾ ಎಂದು ಜೋಶಿ ಕಿಡಿರಿದ್ದಾರೆ .
The ongoing SIT investigation into the alleged murder case in Dharmasthala has sparked widespread reactions across the state. Union Minister Pralhad Joshi made explosive statements today, slamming the Congress government for what he termed a politically motivated investigation driven by baseless remarks.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am