ಬ್ರೇಕಿಂಗ್ ನ್ಯೂಸ್
18-08-25 08:45 pm Mangalore Correspondent ಕರ್ನಾಟಕ
ಬೆಂಗಳೂರು, ಆ 18 : ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸೋಮವಾರ ವಿಧಾನಸಭೆ ಕಲಾಪದ ವೇಳೆ ಧರ್ಮಸ್ಥಳ ಕೇಸ್ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು.


ಒಂದೆರಡು ದಿನ ಸುಮ್ಮನಿರಿ;
“ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ದವಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ” ಎಂದು ಪ್ರತಿಪಕ್ಷಗಳಿಗೆ ಆಗ್ರಹಿಸಿದರು.

“ಪ್ರತಿಪಕ್ಷದವರು ಮೊದಲೇ ಎಸ್ ಐಟಿ ರಚನೆ ಬೇಡ ಎಂದು ಹೇಳಬೇಕಿತ್ತು. ಆದರೆ ಹದಿನೈದು ದಿನ ಕಳೆದ ನಂತರ ಹೇಳುತ್ತಾ ಇದ್ದೀರಿ. ಈ ವಿಚಾರದಲ್ಲಿ ಮೊದಲು ನೀವು ಮಾತನಾಡಿಯೇ ಇಲ್ಲ. ದಿನಬೆಳಗಾದರೆ ನಿಮ್ಮ (ಪ್ರತಿಪಕ್ಷಗಳ ನಾಯಕರು) ಮುಖ್ಯಮಂತ್ರಿಗಳ ಮೇಲೆ, ನನ್ನ ಮೇಲೆ ಸೇರಿದಂತೆ ಅನೇಕರ ಮೇಲೆ ಯಾರೋ ಒಬ್ಬ ಆಪಾದನೆ ಮಾಡಿದ್ದಾರೆ. ಇದರಲ್ಲಿ ಷಡ್ಯಂತ್ರ ಇರಬಹುದು. ಇದೆಲ್ಲವೂ ಆಚೆ ಬರಬೇಕು ಅದಕ್ಕಾಗಿ ಗೃಹಸಚಿವರು ಕಾನೂನಿನ ಅಡಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಲ್ಲ ;
“ಯಾವುದೇ ಗೌಪ್ಯ ಮಾಹಿತಿಗಳನ್ನು ಬಹಿರಂಗಗೊಳಿಸುವುದಿಲ್ಲ ಎಂದು ಗೃಹಸಚಿವರು ಪ್ರಮಾಣ ವಚನ ತೆಗೆದುಕೊಂಡಿರುತ್ತಾರೆ. ವಿರೋಧ ಪಕ್ಷದಲ್ಲಿ ಇರುವ ನೀವುಗಳು ಸಹ ಅಧಿಕಾರದಲ್ಲಿದ್ದವರು. ತನಿಖೆ ವಿಚಾರವನ್ನು ಬಹಿರಂಗಪಡಿಸುವ ಮೊದಲು ಎಲ್ಲರೂ ತಾಳ್ಮೆಯಿಂದ ಇರಬೇಕು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಇದರಲ್ಲಿ ರಾಜಕೀಯ ಮಾಡಬೇಡಿ” ಎಂದರು.
ತಪ್ಪು ಯಾರೇ ಮಾಡಿದ್ದರು ಶಿಕ್ಷೆ ಆಗಿಯೇ ಆಗುತ್ತದೆ. ಸೌಜನ್ಯ ಪ್ರಕರಣದಲ್ಲಿ ಯಾವುದೇ ತನಿಖೆ ನಡೆಯಲಿ ಎಂದು ಪ್ರತಿಪಕ್ಷವರು ಹೇಳಿದರು. ನಾವು ಅದನ್ನು ಗೌರವಿಸಿದೆವು. ಕೊನೆಗೆ ನ್ಯಾಯಲಯ ಹಾಗೂ ಸಿಬಿಐ ನವರು ಅಂತಿಮ ತೀರ್ಪು ನೀಡಿದಾಗ ಏನೂ ಇಲ್ಲ ಎಂದು ತಿಳಿಯಿತು” ಎಂದು ಹೇಳಿದರು.
“ತನಿಖೆ ಯಾವ ಕಾರಣಕ್ಕೆ ಪ್ರಾರಂಭವಾಗುತ್ತದೆ ಎಂಬುದು ಪ್ರತಿಪಕ್ಷಗಳಿಗೂ ತಿಳಿದಿದೆ. ಧರ್ಮಸ್ಥಳ ವಿಚಾರದಲ್ಲಿ ಸರಿತಪ್ಪುಗಳಿವೆಯೋ, ಷಡ್ಯಂತ್ರವಿದೆಯೋ ಎಂಬುದು ತನಿಖೆ ನಂತರ ತಿಳಿಯುತ್ತದೆ. ವ್ಯಕ್ತಿಯೊಬ್ಬ ತಲೆಬುರುಡೆ ಹಿಡಿದುಕೊಂಡು ನ್ಯಾಯಲಯದ ಮುಂದೆ ಹೇಳಿಕೆ ನೀಡಿದ ಮೇಲೆ ಇದನ್ನು ಇಡೀ ದೇಶ ನೋಡಿತು. ಜೊತೆಗೆ ಎಲ್ಲಾ ಮಾಧ್ಯಮಗಳು ಇದರ ಬಗ್ಗೆ ಗಮನ ಸೆಳೆಯಿತು” ಎಂದರು.
Deputy Chief Minister D.K. Shivakumar has stated that stern action will be taken against anyone found making false accusations in the Dharmasthala case, following assurances from Chief Minister Siddaramaiah during a Congress Legislature Party (CLP) meeting.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm