ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
25-10-25 09:00 pm
Bangalore Correspondent
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm