ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm