ಬ್ರೇಕಿಂಗ್ ನ್ಯೂಸ್
21-08-25 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತ್ಯ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ.
ತಮ್ಮ ಮನವಿ ಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಮಿಟ್ ಪಡೆಯದೆ ಎಲೆಕ್ಟಿಕ್ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಿ 2024ರ ಜು.26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ನಿಕ್ ವಾಹನಗಳ ಸಂಖ್ಯೆ ಹೆಚ್ಚಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿದ್ದ ಆಟೋ ರಿಕ್ಷಾಗಳಿಗೆ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ.
2023ರಲ್ಲಿ 7,629ರಷ್ಟಿದ್ದ ಆಟೋರಿಕ್ಷಾ ಸಂಖ್ಯೆ ಜಿಲ್ಲಾಧಿಕಾರಿ ಆದೇಶದ ನಂತರ ಅಗತ್ಯ ಪ್ರಮಾಣಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.
ಅಲ್ಲದೆ 2025ರ ಜು.9ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಆಟೋ ಚಾಲಕರ ಸಂಘವು ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬಾರದು ಎಂದು ಕೋರಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ಮನವಿ ಪತ್ರ ಪರಿಗಣಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಸಂಘ ಕೋರಿತ್ತು.
The Karnataka High Court has directed the Deputy Commissioner of Dakshina Kannada district to take a legal and appropriate decision within two weeks regarding a petition filed by the Mangalore Auto Rickshaw Drivers and Owners Association, urging the authorities not to grant fresh permits for electric autos in Mangaluru city.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm