ಬ್ರೇಕಿಂಗ್ ನ್ಯೂಸ್
21-08-25 10:21 pm HK News Desk ಕರ್ನಾಟಕ
ಹುಬ್ಬಳ್ಳಿ, ಆ 21: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ನಡೆಸಿರುವವರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸರ್ಕಾರದ ನಡೆಯಿಂದ ಬೇಸರವಾಗಿದೆ. ಆದ್ದರಿಂದ ಶೀಘ್ರು ಸಾಧು-ಸಂತರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಗುವುದು ಎಂದು ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದ್ದಾರೆ.
ಇಲ್ಲಿಗೆ ಸಮೀಪದ ವರೂರು ನವಗ್ರಹತೀರ್ಥ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರದಿಂದ ಮನಸ್ಸಿಗೆ ಬಹಳ ನೋವಾಗಿದೆ. ನಿಯೋಗದ ಭೇಟಿಗೆ ನಿಗದಿತ ದಿನ ನೀಡುವಂತೆ ಕೋರಿ ಈಗಾಗಲೇ ಗೃಹ ಸಚಿವರಿಗೆ ಪತ್ರವನ್ನೂ ಬರೆಯಲಾಗಿದೆ ಎಂದರು. ವಚನಾನಂದ ಸ್ವಾಮೀಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಎಲ್ಲ ಧರ್ಮದ ಮಠಾಧೀಶರು, ಸಂತರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಅನೇಕ ಸಾಧು-ಸಂತರು ಗೃಹ ಸಚಿವರ ಭೇಟಿಗೆ ಸಮ್ಮತಿ ಸೂಚಿಸಿದ್ದಾರೆ.
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ರಾಜ್ಯದ ಜನರು ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಸರ್ಕಾರ ಎಚ್ಚೆತ್ತುಕೊಳ್ಳದೆ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ ಎಂದು ಸ್ವಾಮೀಜಿ ಕಿಡಿ ಕಾರಿದ್ದಾರೆ .
Accusing the Karnataka government of inaction over an alleged conspiracy against Dharmasthala Dharmadhikari Dr. D. Veerendra Heggade, National Saint Acharya Sri Gunadharanandi Maharaj has announced that a delegation of sadhus and seers will soon meet Union Home Minister Amit Shah to seek intervention.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am