Dharmasthala, Acharya Sri Gunadharanandi Maharaj: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ;  ಶೀಘ್ರ ಸಾಧು-ಸಂತರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವರ ಭೇಟಿ, ಸಿಎಂ ವಿರುದ್ಧ ರಾಷ್ಟ್ರಸಂತ ಶ್ರೀ ಗುಣಧರನಂದಿ ಕಿಡಿ 

21-08-25 10:21 pm       HK News Desk   ಕರ್ನಾಟಕ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ನಡೆಸಿರುವವರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸರ್ಕಾರದ ನಡೆಯಿಂದ ಬೇಸರವಾಗಿದೆ. ಆದ್ದರಿಂದ ಶೀಘ್ರು ಸಾಧು-ಸಂತರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಗುವುದು ಎಂದು ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದ್ದಾರೆ. 

ಹುಬ್ಬಳ್ಳಿ, ಆ 21: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ನಡೆಸಿರುವವರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಸರ್ಕಾರದ ನಡೆಯಿಂದ ಬೇಸರವಾಗಿದೆ. ಆದ್ದರಿಂದ ಶೀಘ್ರು ಸಾಧು-ಸಂತರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಗುವುದು ಎಂದು ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದ್ದಾರೆ. 

ಇಲ್ಲಿಗೆ ಸಮೀಪದ ವರೂರು ನವಗ್ರಹತೀರ್ಥ ಕ್ಷೇತ್ರದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರದಿಂದ ಮನಸ್ಸಿಗೆ ಬಹಳ ನೋವಾಗಿದೆ. ನಿಯೋಗದ ಭೇಟಿಗೆ ನಿಗದಿತ ದಿನ ನೀಡುವಂತೆ ಕೋರಿ ಈಗಾಗಲೇ ಗೃಹ ಸಚಿವರಿಗೆ ಪತ್ರವನ್ನೂ ಬರೆಯಲಾಗಿದೆ ಎಂದರು. ವಚನಾನಂದ ಸ್ವಾಮೀಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಎಲ್ಲ ಧರ್ಮದ ಮಠಾಧೀಶರು, ಸಂತರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಅನೇಕ ಸಾಧು-ಸಂತರು ಗೃಹ ಸಚಿವರ ಭೇಟಿಗೆ ಸಮ್ಮತಿ ಸೂಚಿಸಿದ್ದಾರೆ. 

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ರಾಜ್ಯದ ಜನರು ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಸರ್ಕಾರ ಎಚ್ಚೆತ್ತುಕೊಳ್ಳದೆ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ ಎಂದು ಸ್ವಾಮೀಜಿ ಕಿಡಿ ಕಾರಿದ್ದಾರೆ .

Accusing the Karnataka government of inaction over an alleged conspiracy against Dharmasthala Dharmadhikari Dr. D. Veerendra Heggade, National Saint Acharya Sri Gunadharanandi Maharaj has announced that a delegation of sadhus and seers will soon meet Union Home Minister Amit Shah to seek intervention.