ಬ್ರೇಕಿಂಗ್ ನ್ಯೂಸ್
22-08-25 12:29 pm HK News Desk ಕರ್ನಾಟಕ
ತುಮಕೂರು, ಆ 22 : ತಾನು ಓದುವ ಸರಕಾರಿ ಶಾಲೆಗೆ ಕಾಂಪೌಂಡ್ ಕಟ್ಟಿಸಿಕೊಡುವವರೆಗೆ ನಾನು ಶಾಲೆಗೆ ಹೋಗಲ್ಲ ಎಂದು ನಾಲ್ಕನೇ ತರಗತಿ ಬಾಲಕಿಯೊಬ್ಬಳು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಸ್ವತಃ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಭೇಟಿ ನೀಡಿದರು. ಈ ವೇಳೆ ಬಾಲಕಿಯ ಮನವೊಲಿಸಲು ನ್ಯಾಯಾಧೀಶರು ಪ್ರಯತ್ನಿಸಿದ್ದಾರೆ. ಆದರೂ ಕೂಡ ಬಾಲಕಿಯು ಶಾಲಾ ಕಾಂಪೌಂಡ್ ನಿರ್ಮಾಣ ಮಾಡಿದ ನಂತರವೇ ಶಾಲೆಗೆ ಹೋಗುವುದಾಗಿ ಪಟ್ಟು ಹಿಡಿದು ಕುಳಿತಿದ್ದಾಳೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಕೊಂಡಂತೆ ಕಲ್ಯಾಣ ಮಂಟಪವೊಂದನ್ನು ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸುವ ಜನರು ಶಾಲಾ ಆವರಣದೊಳಗೆ ಬಂದು ಶಾಲೆಯ ಪರಿಸರವನ್ನು ಅಸುಚಿಗೊಳಿಸಿ ತೆರಳುತ್ತಿದ್ದಾರೆ. ಇದರಿಂದಾಗಿ ಶಾಲಾ ಆವರಣವೆಲ್ಲ ಕಸಕಡ್ಡಿಗಳಿಂದ ತುಂಬಿ ತುಳುಕುತ್ತಿದೆ.
ಪರೀಕ್ಷೆ ಬರೆಯಲೂ ಕಿರಿಕಿರಿ:
ಶಾಲೆಯಲ್ಲಿ ಪಾಠ ಕೇಳಲು ಹಾಗೂ ಪರೀಕ್ಷಾ ಸಮಯದಲ್ಲಿ ಪರೀಕ್ಷೆ ಬರೆಯಲು ಸಹ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಬಾಲಕಿಯು ನ್ಯಾಯಾಧೀಶರಿಗೆ ತಿಳಿಸಿದ್ದಾರೆ. ಈ ಮೂಲಕ 4ನೇ ತರಗತಿ ವಿದ್ಯಾರ್ಥಿನಿ ತಮ್ಮ ಸರ್ಕಾರಿ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಬೇಕೆಂದು ಹೋರಾಟ ನಡೆಸುತ್ತಿದ್ದಾಳೆ.
ಇತರ ಸಂದರ್ಭಗಳಲ್ಲಿ ಆಟ ಆಡೋಕೆ ಮೈದಾನ ಇರಲ್ಲ. ಮೈದಾನದಲ್ಲಿ ವಾಹನಗಳು ನಿಲ್ಲಿಸುವುದು, ಎಂಜಲು ಎಲೆಗಳನ್ನು ಎಸೆಯುವುದರಿಂದ ಆಟ ಮತ್ತು ಪಾಠಕ್ಕೆ ತೀವ್ರ ಸಮಸ್ಯೆ ಆಗುತ್ತಿದ್ದು, ಕೂಡಲೇ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಿಕೊಡಿ ಇಲ್ಲಾ ಅಂದ್ರೆ ನಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದು ಕುಳಿತಿದ್ದಾಳೆ.
ಕಾಂಪೌಂಡ್ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜಡ್ಜ್ ಸೂಚನೆ:
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರಿನ್ನಿಸ, ಕಾಂಪೌಂಡ್ ನಿರ್ಮಿಸುವಂತೆ ಸೂಕ್ತಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೂ ಕೂಡ ಪತ್ರವನ್ನು ಕಳುಹಿಸಿರುವುದಾಗಿ ತಿಳಿಸಿದ್ದಾರೆ.
In a heartening yet powerful display of civic awareness, a Class 4 student from a government school in Beladhara village of Koratagere taluk, Tumakuru district, refused to attend school until a compound wall is built around the premises.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm