ಬ್ರೇಕಿಂಗ್ ನ್ಯೂಸ್
22-08-25 12:29 pm HK News Desk ಕರ್ನಾಟಕ
ತುಮಕೂರು, ಆ 22 : ತಾನು ಓದುವ ಸರಕಾರಿ ಶಾಲೆಗೆ ಕಾಂಪೌಂಡ್ ಕಟ್ಟಿಸಿಕೊಡುವವರೆಗೆ ನಾನು ಶಾಲೆಗೆ ಹೋಗಲ್ಲ ಎಂದು ನಾಲ್ಕನೇ ತರಗತಿ ಬಾಲಕಿಯೊಬ್ಬಳು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಸ್ವತಃ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಭೇಟಿ ನೀಡಿದರು. ಈ ವೇಳೆ ಬಾಲಕಿಯ ಮನವೊಲಿಸಲು ನ್ಯಾಯಾಧೀಶರು ಪ್ರಯತ್ನಿಸಿದ್ದಾರೆ. ಆದರೂ ಕೂಡ ಬಾಲಕಿಯು ಶಾಲಾ ಕಾಂಪೌಂಡ್ ನಿರ್ಮಾಣ ಮಾಡಿದ ನಂತರವೇ ಶಾಲೆಗೆ ಹೋಗುವುದಾಗಿ ಪಟ್ಟು ಹಿಡಿದು ಕುಳಿತಿದ್ದಾಳೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಕೊಂಡಂತೆ ಕಲ್ಯಾಣ ಮಂಟಪವೊಂದನ್ನು ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸುವ ಜನರು ಶಾಲಾ ಆವರಣದೊಳಗೆ ಬಂದು ಶಾಲೆಯ ಪರಿಸರವನ್ನು ಅಸುಚಿಗೊಳಿಸಿ ತೆರಳುತ್ತಿದ್ದಾರೆ. ಇದರಿಂದಾಗಿ ಶಾಲಾ ಆವರಣವೆಲ್ಲ ಕಸಕಡ್ಡಿಗಳಿಂದ ತುಂಬಿ ತುಳುಕುತ್ತಿದೆ.
ಪರೀಕ್ಷೆ ಬರೆಯಲೂ ಕಿರಿಕಿರಿ:
ಶಾಲೆಯಲ್ಲಿ ಪಾಠ ಕೇಳಲು ಹಾಗೂ ಪರೀಕ್ಷಾ ಸಮಯದಲ್ಲಿ ಪರೀಕ್ಷೆ ಬರೆಯಲು ಸಹ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಬಾಲಕಿಯು ನ್ಯಾಯಾಧೀಶರಿಗೆ ತಿಳಿಸಿದ್ದಾರೆ. ಈ ಮೂಲಕ 4ನೇ ತರಗತಿ ವಿದ್ಯಾರ್ಥಿನಿ ತಮ್ಮ ಸರ್ಕಾರಿ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಬೇಕೆಂದು ಹೋರಾಟ ನಡೆಸುತ್ತಿದ್ದಾಳೆ.
ಇತರ ಸಂದರ್ಭಗಳಲ್ಲಿ ಆಟ ಆಡೋಕೆ ಮೈದಾನ ಇರಲ್ಲ. ಮೈದಾನದಲ್ಲಿ ವಾಹನಗಳು ನಿಲ್ಲಿಸುವುದು, ಎಂಜಲು ಎಲೆಗಳನ್ನು ಎಸೆಯುವುದರಿಂದ ಆಟ ಮತ್ತು ಪಾಠಕ್ಕೆ ತೀವ್ರ ಸಮಸ್ಯೆ ಆಗುತ್ತಿದ್ದು, ಕೂಡಲೇ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಿಕೊಡಿ ಇಲ್ಲಾ ಅಂದ್ರೆ ನಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದು ಕುಳಿತಿದ್ದಾಳೆ.
ಕಾಂಪೌಂಡ್ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜಡ್ಜ್ ಸೂಚನೆ:
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರಿನ್ನಿಸ, ಕಾಂಪೌಂಡ್ ನಿರ್ಮಿಸುವಂತೆ ಸೂಕ್ತಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೂ ಕೂಡ ಪತ್ರವನ್ನು ಕಳುಹಿಸಿರುವುದಾಗಿ ತಿಳಿಸಿದ್ದಾರೆ.
In a heartening yet powerful display of civic awareness, a Class 4 student from a government school in Beladhara village of Koratagere taluk, Tumakuru district, refused to attend school until a compound wall is built around the premises.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm