ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm